ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಒಂಟಿಸಲಗವೊಂದು ಪ್ರತಿನಿತ್ಯ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿದ್ದು, ರೈತರು ಕಂಗಾಲಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲೂ ಈ ಬಾರಿ ಉತ್ತಮ ಮುಂಗಾರು ಹಾಗೂ ಹಿಂಗಾರು ಮಳೆಯಾಗಿದ್ದು, ರೈತರು ಖುಷಿ ಖುಷಿಯಿಂದ ಕೃಷಿ ಚಟುವಟಿಕೆಗಳತ್ತ ತೊಡಗಿದ್ದಾರೆ.
ಉತ್ತಮ ಹಿಂಗಾರು ಮಳೆಯಾಗಿರುವುದರಿಂದ ರೈತರು ತಮ್ಮ ಜಮೀನುಗಳಲ್ಲಿ ಮುಸುಕಿನಜೋಳ, ರಾಗಿ, ತರಕಾರಿಗಳು, ಅವರೆ, ಹುರುಳಿ ಹಾಗೂ ಇನ್ನಿತರ ಫಸಲುಗಳನ್ನು ಬೆಳೆದಿದ್ದಾರೆ. ತಾಲ್ಲೂಕಿನಾದ್ಯಂತ ಉತ್ತಮ ಫಸಲು ಬೆಳೆದು ನಿಂತಿವೆ. ಈ ಸಂತೋಷದ ನಡುವೆ ರೈತರಿಗೆ ಒಂಟಿ ಸಲಗದ ಆತಂಕ ಎದುರಾಗಿದೆ.
ರೈತರ ಜಮೀನುಗಳಿಗೆ ನುಗ್ಗಿ ರಾತ್ರೋರಾತ್ರಿ ಫಸಲುಗಳನ್ನು ಒಂಟಿಸಲಗವೊಂದು ನಾಶ ಮಾಡುತ್ತಿದೆ.
ಬೆಳೆ ನಾಶದಿಂದ ತೀವ್ರ ಕಂಗಲಾಗಿರುವ ರೈತರು ರಾತ್ರಿ ವೇಳೆ ನೀರು ಹಾಯಿಸಲು ಜಮೀನಿಗೆ ತೆರಳಲು ಭಯ ಪಡುತ್ತಿದ್ದಾರೆ.
ಅರಣ್ಯದಿಂದ ಪ್ರತಿನಿತ್ಯ ನಾಡಿಗೆ ಬರುತ್ತಿರುವ ಈ ಒಂಟಿಸಲಗದ ದಾಳಿಯಿಂದ ಜನತೆ ಬೇಸತ್ತು ಹೋಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಹೆಚ್ಚಿನ ಅನಾಹುತ ಆಗುವುದಕ್ಕಿಂತ ಮುಂಚೆ ಅರಣ್ಯ ಇಲಾಖೆ ಅಧಿಕಾರಿಗಳು ಒಂಟಿಸಲಗದ ಹಾವಳಿಯನ್ನು ತಡೆಯಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಹಾಗೂ ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…