ಚಾಮರಾಜನಗರ

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ಒಂಟಿ ಸಲಗವೊಂದು ಪ್ರತಿನಿತ್ಯ ರೈತರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವುದರಿಂದ ಈ ಆನೆಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.

ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸುತ್ತಮುತ್ತಲಿನ ರೈತರ ಜಮೀನುಗಳಲ್ಲಿ ಪ್ರತಿನಿತ್ಯ ರಾತ್ರಿ ವೇಳೆ ಲಗ್ಗೆ ಇಟ್ಟು ಕಷ್ಟಪಟ್ಟು ಬೆಳೆದಿರುವ ಬಾಳೆ, ಮೆಣಸಿ, ಎಲೆಕೋಸು ಆಲೂಗೆಡ್ಡೆ, ಮುಸುಕಿನ ಜೋಳ ಬೆಳ್ಳುಳ್ಳಿ ಬೆಳೆಗಳನ್ನು ನಾಶಪಡಿಸುತ್ತಿದೆ. ಇದಲ್ಲದೆ ಕೃಷಿ ಪರಿಕರಗಳನ್ನು ನಾಶಪಡಿಸುತ್ತಿರುವುದರಿಂದ ಈ ಭಾಗದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಫೆಬ್ರವರಿ.21ರಂದು ಈ ಭಾಗದ ರೈತರು ಕಾಡುಪ್ರಾಣಿಗಳ ಹಾವಳಿ ತಡೆಯುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ವಲಯ ಅರಣ್ಯಾಧಿಕಾರಿಗಳು ಕಾಡಾನೆ ಹಾವಳಿ ನಿಯಂತ್ರಣ ಮಾಡುವುದಾಗಿ ಭರವಸೆ ನೀಡಿದ್ದರು, ಆದರೂ ಯಾವುದೇ ಸೂಕ್ತ ಕ್ರಮ ಕೈಗೊಳ್ಳದೆ ಇರುವುದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಇರುವ ಅಲ್ಪ ಸ್ವಲ್ಪ ನೀರಿನಲ್ಲಿ ಸಾಲ ಮಾಡಿ ಬೆಳೆ ಬೆಳೆಯುತ್ತಿದ್ದಾರೆ. ಆದರೆ ನಿರಂತರ ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆದಿರುವ ಬೆಳೆಯು ಕೈ ಸೇರುತಿಲ್ಲ ಇದರಿಂದ ಸಂಕಷ್ಟಕ್ಕೀಡಾಗಿದ್ದು, ರೈತರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಇದೇ ರೀತಿ ಆನೆ ದಾಳಿ ನಿರಂತರವಾಗಿ ಮುಂದುವರೆದರೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಈ ಭಾಗದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಮುಂಜಾನೆಯು ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುನಿಗುಡಿ ಶೆಟ್ಟಿ ದೊಡ್ಡಿ ಗ್ರಾಮದ ರೈತನೆ ಮೇಲೆ ಕಾಡಾನೆ ದಾಳಿ ಮಾಡಿರುವುದರಿಂದ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಇದೀಗ ಬುಧವಾರ ಮಧ್ಯಾಹ್ನ ಒಂಟಿ ಸಲಗ ಒಂದು ಮಧ್ಯಾಹ್ನ 12 ಗಂಟೆ ವೇಳೆ ರಸ್ತೆ ಬದಿಯಲ್ಲಿಯೇ ಅಡ್ಡಾಡುತ್ತಿರುವುದರಿಂದ ವಾಹನ ಸವಾರರು ಆತಂಕದಲ್ಲಿಯೆ ಸಂಚಾರ ಮಾಡುತ್ತಿದ್ದಾರೆ. ಇನ್ನು ಮುಂದಾದರು ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವವರೆ ಎಂದು ಕಾದು ನೋಡಬೇಕಿದೆ.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

2 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

2 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

2 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

2 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

2 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

2 hours ago