ಚಾಮರಾಜನಗರ

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ಒಂಟಿ ಸಲಗವೊಂದು ಪ್ರತಿನಿತ್ಯ ರೈತರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವುದರಿಂದ ಈ ಆನೆಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.

ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸುತ್ತಮುತ್ತಲಿನ ರೈತರ ಜಮೀನುಗಳಲ್ಲಿ ಪ್ರತಿನಿತ್ಯ ರಾತ್ರಿ ವೇಳೆ ಲಗ್ಗೆ ಇಟ್ಟು ಕಷ್ಟಪಟ್ಟು ಬೆಳೆದಿರುವ ಬಾಳೆ, ಮೆಣಸಿ, ಎಲೆಕೋಸು ಆಲೂಗೆಡ್ಡೆ, ಮುಸುಕಿನ ಜೋಳ ಬೆಳ್ಳುಳ್ಳಿ ಬೆಳೆಗಳನ್ನು ನಾಶಪಡಿಸುತ್ತಿದೆ. ಇದಲ್ಲದೆ ಕೃಷಿ ಪರಿಕರಗಳನ್ನು ನಾಶಪಡಿಸುತ್ತಿರುವುದರಿಂದ ಈ ಭಾಗದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಫೆಬ್ರವರಿ.21ರಂದು ಈ ಭಾಗದ ರೈತರು ಕಾಡುಪ್ರಾಣಿಗಳ ಹಾವಳಿ ತಡೆಯುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ವಲಯ ಅರಣ್ಯಾಧಿಕಾರಿಗಳು ಕಾಡಾನೆ ಹಾವಳಿ ನಿಯಂತ್ರಣ ಮಾಡುವುದಾಗಿ ಭರವಸೆ ನೀಡಿದ್ದರು, ಆದರೂ ಯಾವುದೇ ಸೂಕ್ತ ಕ್ರಮ ಕೈಗೊಳ್ಳದೆ ಇರುವುದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಇರುವ ಅಲ್ಪ ಸ್ವಲ್ಪ ನೀರಿನಲ್ಲಿ ಸಾಲ ಮಾಡಿ ಬೆಳೆ ಬೆಳೆಯುತ್ತಿದ್ದಾರೆ. ಆದರೆ ನಿರಂತರ ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆದಿರುವ ಬೆಳೆಯು ಕೈ ಸೇರುತಿಲ್ಲ ಇದರಿಂದ ಸಂಕಷ್ಟಕ್ಕೀಡಾಗಿದ್ದು, ರೈತರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಇದೇ ರೀತಿ ಆನೆ ದಾಳಿ ನಿರಂತರವಾಗಿ ಮುಂದುವರೆದರೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಈ ಭಾಗದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಮುಂಜಾನೆಯು ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುನಿಗುಡಿ ಶೆಟ್ಟಿ ದೊಡ್ಡಿ ಗ್ರಾಮದ ರೈತನೆ ಮೇಲೆ ಕಾಡಾನೆ ದಾಳಿ ಮಾಡಿರುವುದರಿಂದ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಇದೀಗ ಬುಧವಾರ ಮಧ್ಯಾಹ್ನ ಒಂಟಿ ಸಲಗ ಒಂದು ಮಧ್ಯಾಹ್ನ 12 ಗಂಟೆ ವೇಳೆ ರಸ್ತೆ ಬದಿಯಲ್ಲಿಯೇ ಅಡ್ಡಾಡುತ್ತಿರುವುದರಿಂದ ವಾಹನ ಸವಾರರು ಆತಂಕದಲ್ಲಿಯೆ ಸಂಚಾರ ಮಾಡುತ್ತಿದ್ದಾರೆ. ಇನ್ನು ಮುಂದಾದರು ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವವರೆ ಎಂದು ಕಾದು ನೋಡಬೇಕಿದೆ.

 

 

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

20 mins ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago