ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ಒಂಟಿ ಸಲಗವೊಂದು ಪ್ರತಿನಿತ್ಯ ರೈತರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವುದರಿಂದ ಈ ಆನೆಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.
ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸುತ್ತಮುತ್ತಲಿನ ರೈತರ ಜಮೀನುಗಳಲ್ಲಿ ಪ್ರತಿನಿತ್ಯ ರಾತ್ರಿ ವೇಳೆ ಲಗ್ಗೆ ಇಟ್ಟು ಕಷ್ಟಪಟ್ಟು ಬೆಳೆದಿರುವ ಬಾಳೆ, ಮೆಣಸಿ, ಎಲೆಕೋಸು ಆಲೂಗೆಡ್ಡೆ, ಮುಸುಕಿನ ಜೋಳ ಬೆಳ್ಳುಳ್ಳಿ ಬೆಳೆಗಳನ್ನು ನಾಶಪಡಿಸುತ್ತಿದೆ. ಇದಲ್ಲದೆ ಕೃಷಿ ಪರಿಕರಗಳನ್ನು ನಾಶಪಡಿಸುತ್ತಿರುವುದರಿಂದ ಈ ಭಾಗದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಫೆಬ್ರವರಿ.21ರಂದು ಈ ಭಾಗದ ರೈತರು ಕಾಡುಪ್ರಾಣಿಗಳ ಹಾವಳಿ ತಡೆಯುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ವಲಯ ಅರಣ್ಯಾಧಿಕಾರಿಗಳು ಕಾಡಾನೆ ಹಾವಳಿ ನಿಯಂತ್ರಣ ಮಾಡುವುದಾಗಿ ಭರವಸೆ ನೀಡಿದ್ದರು, ಆದರೂ ಯಾವುದೇ ಸೂಕ್ತ ಕ್ರಮ ಕೈಗೊಳ್ಳದೆ ಇರುವುದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಇರುವ ಅಲ್ಪ ಸ್ವಲ್ಪ ನೀರಿನಲ್ಲಿ ಸಾಲ ಮಾಡಿ ಬೆಳೆ ಬೆಳೆಯುತ್ತಿದ್ದಾರೆ. ಆದರೆ ನಿರಂತರ ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆದಿರುವ ಬೆಳೆಯು ಕೈ ಸೇರುತಿಲ್ಲ ಇದರಿಂದ ಸಂಕಷ್ಟಕ್ಕೀಡಾಗಿದ್ದು, ರೈತರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಇದೇ ರೀತಿ ಆನೆ ದಾಳಿ ನಿರಂತರವಾಗಿ ಮುಂದುವರೆದರೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಈ ಭಾಗದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಬುಧವಾರ ಮುಂಜಾನೆಯು ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುನಿಗುಡಿ ಶೆಟ್ಟಿ ದೊಡ್ಡಿ ಗ್ರಾಮದ ರೈತನೆ ಮೇಲೆ ಕಾಡಾನೆ ದಾಳಿ ಮಾಡಿರುವುದರಿಂದ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಇದೀಗ ಬುಧವಾರ ಮಧ್ಯಾಹ್ನ ಒಂಟಿ ಸಲಗ ಒಂದು ಮಧ್ಯಾಹ್ನ 12 ಗಂಟೆ ವೇಳೆ ರಸ್ತೆ ಬದಿಯಲ್ಲಿಯೇ ಅಡ್ಡಾಡುತ್ತಿರುವುದರಿಂದ ವಾಹನ ಸವಾರರು ಆತಂಕದಲ್ಲಿಯೆ ಸಂಚಾರ ಮಾಡುತ್ತಿದ್ದಾರೆ. ಇನ್ನು ಮುಂದಾದರು ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವವರೆ ಎಂದು ಕಾದು ನೋಡಬೇಕಿದೆ.
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…