ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಳ್ಳಂಬೆಳಿಗ್ಗೆಯೇ ಆನೆಯೊಂದು ಬೆಟ್ಟದ ಸುತ್ತಮುತ್ತೆಲ್ಲಾ ಓಡಾಗಿ ಸ್ಥಳೀಯರು ಹಾಗೂ ಪ್ರವಾಸಿಗರಿಗೆ ಭಾರೀ ಕೀಟಲೆ ನೀಡಿದೆ.
ಬಿಳಿಗಿರಿರಂಗನ ಬೆಟ್ಟದ ಪ್ರಮುಖ ರಸ್ತೆಗಳಲ್ಲಿ, ಬಂಗಲೆ ಪೋಡಿನ ರಸ್ತೆಯಲ್ಲಿ ಮನಬಂದಂತೆ ಓಡಾಡಿರುವ ಕಾಡಾನೆ ಎಲ್ಲರಲ್ಲಿಯೂ ಆತಂಕ ಉಂಟುಮಾಡಿದೆ.
ಬೆಟ್ಟದ ರಸ್ತೆಯಲ್ಲಿ ನಿಂತು ಅತ್ತಿಂದಿತ್ತ ಸೊಂಡಿಲು ಬೀಸುತ್ತಾ ಗಜ ಗಾಂಭೀರ್ಯದಿಂದ ಹೆಜ್ಜೆಹಾಕಿರುವ ಒಂಟಿ ಸಲಗ ರಸ್ತೆಯಲ್ಲಿ ತಿರುಗಾಡುತ್ತಿದ್ದ ಕೆಎಸ್ಆರ್ಟಿಸಿ ವಾಹನ, ಟಾಟಾ ಏಸ್ ಸೇರಿದಂತೆ ತನಗೆ ಅಡ್ಡಲಾಗಿ ಬಂದ ಎಲ್ಲಾ ವಾಹನಗಳನ್ನು ಹಿಮ್ಮೆಟ್ಟಿಸಿ ಆಕ್ರೋಶ ಹೊರ ಹಾಕಿದೆ.
ಆಹಾರಕ್ಕಾಗಿ ಕಳೆದೆರೆಡು ತಿಂಗಳಿನಿಂದ ಕಾಡಾನೆ ಪೋಡಿನ ಕಡೆಗೆ ಬರುತ್ತಿದೆ. ಹಣ್ಣು-ಹಂಪಲ ಸೇವಿಸಿ ಹೊರ ಹೋಗುವ ವೇಳೆ ಅಡ್ಡ ಸಿಕ್ಕ ವಾಹನಗಳ ಮೇಲೆ ದಾಳಿ ಮಾಡುವುದು ಹೀಗೆ ಆನೆ ಕಾಟ ನೀಡುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…