ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಳ್ಳಂಬೆಳಿಗ್ಗೆಯೇ ಆನೆಯೊಂದು ಬೆಟ್ಟದ ಸುತ್ತಮುತ್ತೆಲ್ಲಾ ಓಡಾಗಿ ಸ್ಥಳೀಯರು ಹಾಗೂ ಪ್ರವಾಸಿಗರಿಗೆ ಭಾರೀ ಕೀಟಲೆ ನೀಡಿದೆ.
ಬಿಳಿಗಿರಿರಂಗನ ಬೆಟ್ಟದ ಪ್ರಮುಖ ರಸ್ತೆಗಳಲ್ಲಿ, ಬಂಗಲೆ ಪೋಡಿನ ರಸ್ತೆಯಲ್ಲಿ ಮನಬಂದಂತೆ ಓಡಾಡಿರುವ ಕಾಡಾನೆ ಎಲ್ಲರಲ್ಲಿಯೂ ಆತಂಕ ಉಂಟುಮಾಡಿದೆ.
ಬೆಟ್ಟದ ರಸ್ತೆಯಲ್ಲಿ ನಿಂತು ಅತ್ತಿಂದಿತ್ತ ಸೊಂಡಿಲು ಬೀಸುತ್ತಾ ಗಜ ಗಾಂಭೀರ್ಯದಿಂದ ಹೆಜ್ಜೆಹಾಕಿರುವ ಒಂಟಿ ಸಲಗ ರಸ್ತೆಯಲ್ಲಿ ತಿರುಗಾಡುತ್ತಿದ್ದ ಕೆಎಸ್ಆರ್ಟಿಸಿ ವಾಹನ, ಟಾಟಾ ಏಸ್ ಸೇರಿದಂತೆ ತನಗೆ ಅಡ್ಡಲಾಗಿ ಬಂದ ಎಲ್ಲಾ ವಾಹನಗಳನ್ನು ಹಿಮ್ಮೆಟ್ಟಿಸಿ ಆಕ್ರೋಶ ಹೊರ ಹಾಕಿದೆ.
ಆಹಾರಕ್ಕಾಗಿ ಕಳೆದೆರೆಡು ತಿಂಗಳಿನಿಂದ ಕಾಡಾನೆ ಪೋಡಿನ ಕಡೆಗೆ ಬರುತ್ತಿದೆ. ಹಣ್ಣು-ಹಂಪಲ ಸೇವಿಸಿ ಹೊರ ಹೋಗುವ ವೇಳೆ ಅಡ್ಡ ಸಿಕ್ಕ ವಾಹನಗಳ ಮೇಲೆ ದಾಳಿ ಮಾಡುವುದು ಹೀಗೆ ಆನೆ ಕಾಟ ನೀಡುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…