ಚಾಮರಾಜನಗರ

ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆ ಉಪಟಳ: ಬೆಚ್ಚಿಬಿದ್ದ ಭಕ್ತಾಧಿಗಳು

ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಳ್ಳಂಬೆಳಿಗ್ಗೆಯೇ ಆನೆಯೊಂದು ಬೆಟ್ಟದ ಸುತ್ತಮುತ್ತೆಲ್ಲಾ ಓಡಾಗಿ ಸ್ಥಳೀಯರು ಹಾಗೂ ಪ್ರವಾಸಿಗರಿಗೆ ಭಾರೀ ಕೀಟಲೆ ನೀಡಿದೆ.

ಬಿಳಿಗಿರಿರಂಗನ ಬೆಟ್ಟದ ಪ್ರಮುಖ ರಸ್ತೆಗಳಲ್ಲಿ, ಬಂಗಲೆ ಪೋಡಿನ ರಸ್ತೆಯಲ್ಲಿ ಮನಬಂದಂತೆ ಓಡಾಡಿರುವ ಕಾಡಾನೆ ಎಲ್ಲರಲ್ಲಿಯೂ ಆತಂಕ ಉಂಟುಮಾಡಿದೆ.

ಬೆಟ್ಟದ ರಸ್ತೆಯಲ್ಲಿ ನಿಂತು ಅತ್ತಿಂದಿತ್ತ ಸೊಂಡಿಲು ಬೀಸುತ್ತಾ ಗಜ ಗಾಂಭೀರ್ಯದಿಂದ ಹೆಜ್ಜೆಹಾಕಿರುವ ಒಂಟಿ ಸಲಗ ರಸ್ತೆಯಲ್ಲಿ ತಿರುಗಾಡುತ್ತಿದ್ದ ಕೆಎಸ್‌ಆರ್‌ಟಿಸಿ ವಾಹನ, ಟಾಟಾ ಏಸ್‌ ಸೇರಿದಂತೆ ತನಗೆ ಅಡ್ಡಲಾಗಿ ಬಂದ ಎಲ್ಲಾ ವಾಹನಗಳನ್ನು ಹಿಮ್ಮೆಟ್ಟಿಸಿ ಆಕ್ರೋಶ ಹೊರ ಹಾಕಿದೆ.

ಆಹಾರಕ್ಕಾಗಿ ಕಳೆದೆರೆಡು ತಿಂಗಳಿನಿಂದ ಕಾಡಾನೆ ಪೋಡಿನ ಕಡೆಗೆ ಬರುತ್ತಿದೆ. ಹಣ್ಣು-ಹಂಪಲ ಸೇವಿಸಿ ಹೊರ ಹೋಗುವ ವೇಳೆ ಅಡ್ಡ ಸಿಕ್ಕ ವಾಹನಗಳ ಮೇಲೆ ದಾಳಿ ಮಾಡುವುದು ಹೀಗೆ ಆನೆ ಕಾಟ ನೀಡುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

1 hour ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

1 hour ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

2 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

3 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

4 hours ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

4 hours ago