ಚಾಮರಾಜನಗರ

ಹನೂರು: ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿಸಲಗ ದಾಂಧಲೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ವರ್ಗದವರು ಬೆಚ್ಚಿಬಿದ್ದಿದ್ದಾರೆ.

ನೆರೆಯ ತಮಿಳುನಾಡು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಕರ್ನಾಟಕದ ಗಡಿ ಪಾಲಾರ್ ಚೆಕ್ ಪೋಸ್ಟ್ ನಲ್ಲಿ ಅಕ್ರಮ ಮದ್ಯ, ಹಣ ಸಾಗಣೆ ಸೇರಿದಂತೆ ಇನ್ನಿತರ ಅಕ್ರಮ ಚಟುವಟಿಕೆಗಳನ್ನು ತಡೆಯಲು ಬೆಳಗ್ಗೆ ಹಾಗೂ ರಾತ್ರಿ ಪಾಳಿಯಗಳಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.

ಅದರಂತೆ ಬುಧವಾರ ರಾತ್ರಿ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಮುಖ್ಯಪೇದೆ ರಾಮದಾಸ್, ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ರಮೇಶ್, ಗಾಡ್ ಮಹೇಶ್ ಕರ್ತವ್ಯದಲ್ಲಿದ್ದರು. ಈ ವೇಳೆ ರಾತ್ರಿ 10:30ರಲ್ಲಿ ಏಕಾಏಕಿ ಒಂಟಿ ಸಲಗವೊಂದು ವಸತಿಗೃಹದ ಸಮೀಪವೇ ಬಂದು ಘೀಳಿಟ್ಟಿದೆ. ಇದಲ್ಲದೆ ವಸತಿಗೃಹದ ಸಮೀಪವೇ ಬಂದು ನಿಂತಾಗ ಸಿಬ್ಬಂದಿ ವರ್ಗದವರು ಆನೆಯನ್ನು ಓಡಿಸಲು ಇನ್ನಿಲ್ಲದ ಪ್ರಯತ್ನ ಮಾಡಿದ್ದಾರೆ. ಆದರೆ ಆನೆ ಮಧ್ಯ ರಸ್ತೆಯಿಂದ ತೆರಳದೆ ನಿಂತಿದೆ.

ನಂತರ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಪಟಾಕಿ ಸಿಡಿಸಿದ್ದಾರೆ. ಪಟಾಕಿ ಶಬ್ದಕ್ಕೂ ಜಗ್ಗದೆ ಸ್ವಲ್ಪ ದೂರ ಸೇತುವೆಯ ಮೇಲೆ ಮುಂದೆ ತೆರಳಿ ನಂತರ ಮತ್ತೆ ವಾಪಸ್ ಅರಣ್ಯಕ್ಕೆ ತೆರಳಿದೆ.

 

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

1 hour ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

2 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

2 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

4 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

4 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

5 hours ago