ಚಾಮರಾಜನಗರ

ಕಬ್ಬಿನ ಲಾರಿ ಮೇಲೆ ಆನೆ ದಾಳಿ

ಚಾಮರಾಜನಗರ : ಜಿಲ್ಲೆಯ ಗಡಿಭಾಗದಲ್ಲಿರುವ ತಮಿಳುನಾಡಿಗೆ ಸೇರಿದ ಆಸನೂರು ಬಳಿ ಕಬ್ಬಿನ ಆಸೆಗೆ ರಸ್ತೆಗಿಳಿದ ಕಾಡಾನೆಯೊಂದು ಎದುರಿಗೆ ಬಂದ ಲಾರಿ ಹತ್ತಲು ಮುಂದಾಗಿ, ಕಬ್ಬು ಕಿತ್ತುಕೊಂಡ ಘಟನೆ ನಡೆದಿದೆ.

ಆಸನೂರಿನ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡಾನೆಯು ಲಾರಿಯನ್ನು ತಡೆದು ಅದರ ಮುಂಭಾಗದ ಮೇಲೆ ಕಾಲಿಟ್ಟು ಕಬ್ಬು ಕಿತ್ತಿದೆ. ಆನೆ ಕಾಲಿಟ್ಟಿದ್ದೇ ತಡ ಲಾರಿಯ ಗಾಜು ಪುಡಿ ಪುಡಿಯಾಗಿದೆ. ಆದರೂ ಆನೆ ಒಂದು ಕಂತೆ ಕಬ್ಬನ್ನು ಎಳೆದೊಯ್ದಿದೆ. ಇದರಿಂದಾಗಿ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ತಮಿಳುನಾಡು ಹಾಗೂ ಕರ್ನಾಟಕ ಗಡಿಯಲ್ಲಿ ನಿರಂತರವಾಗಿ ಕಾಡಾನೆ ಓಡಾಡುತ್ತಿದ್ದು, ಹೆದ್ದಾರಿ ಬದಿ ಬಂದು ನಿಂತು ತಮಿಳುನಾಡಿನ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಣೆ ಮಾಡುವ ಲಾರಿಗಳನ್ನು ತಡೆಯುತ್ತಿದೆ. ನಂತರ ಕಬ್ಬಿನ ಕಂತೆಯನ್ನು ಪಡೆದು ಸುಮ್ಮನಾಗುತ್ತಿದೆ. ಇತರೆ ವಾಹನಗಳಗತ್ತ ಕಣ್ಣೆತ್ತಿಯೂ ನೋಡದ ಕಾಡಾನೆ ಕಬ್ಬು ಹಾಗೂ ತರಕಾರಿ ತುಂಬಿದ ವಾಹನಗಳನ್ನೇ ಆಯ್ಕೆ ಮಾಡುತ್ತಿದೆ. ಇದರಿಂದಾಗಿ ಲಾರಿ ಚಾಲಕರು ಪರದಾಡುವಂತಾಗಿದೆ.

ಹಿಂದಿನಿಂದಲೂ ಕಾಡಾನೆಯು ಹೆದ್ದಾರಿ ಬದಿಗೆ ಬಂದಾಗ ಕಬ್ಬಿನ ಲಾರಿಗಳ ಸಿಬ್ಬಂದಿ ಕಬ್ಬಿನ ಕಂತೆ ಎಸೆದು ದಾರಿ ಬಿಡಿಸಿಕೊಂಡು ಹೋಗುತ್ತಿದ್ದರು. ಕಬ್ಬಿನ ರುಚಿ ಕಂಡಿರುವ ಆನೆಯು ಆಗಾಗ್ಗೆ ಹೆದ್ದಾರಿಗೆ ಬಂದು ನಿಂತು ಕಬ್ಬಿನ ಲಾರಿಗಳನ್ನು ತಡೆಯುತ್ತಿದೆ.

ಆಂದೋಲನ ಡೆಸ್ಕ್

Recent Posts

ರತ್ನಪುರಿ | ನಾಳೆಯಿಂದ ಹಿಂದೂ ಮುಸ್ಲಿಂ ಭಾವೈಕ್ಯತೆ ಜಾತ್ರೆ

ಹುಣಸೂರು : ರಾಜ್ಯದಲ್ಲೇ ಜಾನುವಾರುಗಳ ಪ್ರಮುಖ ಜಾತ್ರೆಯಲ್ಲೊಂದಾದ ಹುಣಸೂರು ತಾಲೂಕಿನ ರತ್ನಪುರಿ(ದರ್ಗ)ಯಲ್ಲಿ ಹಿಂದೂ-ಮುಸ್ಲಿಮರ ಭಾವೈಕ್ಯತೆ ಮೆರೆವ ಶ್ರೀ ಅಂಜನೇಯ ಸ್ವಾಮಿಯ…

10 mins ago

ಚಾ.ನಗರ | ವಿವಿಧ ಗ್ರಾ.ಪಂಚಾಯ್ತಿಗಳಿಗೆ ಸಿಇಒ ದೀಢಿರ್‌ ಭೇಟಿ

ಚಾಮರಾಜನಗರ : ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಅವರು ದೀಢಿರ್‌ಭೇಟಿ ನೀಡಿ, ವಿವಿಧ…

19 mins ago

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಮೈಸೂರು : ಅರಣ್ಯ ಇಲಾಖೆ ಇರಿಸಿದ ಬೋನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆ ಸೆರೆಯಾಗಿದೆ. ಸರಗೂರು ತಾಲ್ಲೂಕಿನ ಎನ್.ಬೆಳತ್ತೂರು ಹಳೆ…

26 mins ago

ಮೈಸೂರು | ರೈಲು ಸೇವೆಗಳ ನಿಯಂತ್ರಣ, ಮರುನಿಗದಿ

ಮೈಸೂರು : ದೇವರಗುಡ್ಡ ಮತ್ತು ಬ್ಯಾಡಗಿ ನಡುವಿನ ಎಲ್ಸಿ ಸಂಖ್ಯೆ 222 ರಲ್ಲಿ ತಾತ್ಕಾಲಿಕ ಗರ್ಡರ್‌ಗಳನ್ನು ಸೇರಿಸಲು ಮತ್ತು ತೆಗೆದುಹಾಕಲು…

39 mins ago

ಅರಣ್ಯ ಅಧಿಕಾರಿಗಳಿಂದಲೇ ಮೈಸೂರಿನಲ್ಲಿ ʻಮರಗಳ ಮಾರಣಹೋಮ’

ಮೈಸೂರು : ನಗರದ ಎನ್‌ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…

2 hours ago

ಮೈಸೂರಿನಿಂದ ಲಕ್ನೋಗೆ ಭವ್ಯ ಪೀಠ : UP ವಿಧಾನಸಭೆಯಲ್ಲಿ ಕರ್ನಾಟಕದ ಕಲಾ ಛಾಪು

ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…

2 hours ago