elephant attack
ಚಾಮರಾಜನಗರ : ಜಿಲ್ಲೆಯ ಗಡಿಭಾಗದಲ್ಲಿರುವ ತಮಿಳುನಾಡಿಗೆ ಸೇರಿದ ಆಸನೂರು ಬಳಿ ಕಬ್ಬಿನ ಆಸೆಗೆ ರಸ್ತೆಗಿಳಿದ ಕಾಡಾನೆಯೊಂದು ಎದುರಿಗೆ ಬಂದ ಲಾರಿ ಹತ್ತಲು ಮುಂದಾಗಿ, ಕಬ್ಬು ಕಿತ್ತುಕೊಂಡ ಘಟನೆ ನಡೆದಿದೆ.
ಆಸನೂರಿನ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡಾನೆಯು ಲಾರಿಯನ್ನು ತಡೆದು ಅದರ ಮುಂಭಾಗದ ಮೇಲೆ ಕಾಲಿಟ್ಟು ಕಬ್ಬು ಕಿತ್ತಿದೆ. ಆನೆ ಕಾಲಿಟ್ಟಿದ್ದೇ ತಡ ಲಾರಿಯ ಗಾಜು ಪುಡಿ ಪುಡಿಯಾಗಿದೆ. ಆದರೂ ಆನೆ ಒಂದು ಕಂತೆ ಕಬ್ಬನ್ನು ಎಳೆದೊಯ್ದಿದೆ. ಇದರಿಂದಾಗಿ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ತಮಿಳುನಾಡು ಹಾಗೂ ಕರ್ನಾಟಕ ಗಡಿಯಲ್ಲಿ ನಿರಂತರವಾಗಿ ಕಾಡಾನೆ ಓಡಾಡುತ್ತಿದ್ದು, ಹೆದ್ದಾರಿ ಬದಿ ಬಂದು ನಿಂತು ತಮಿಳುನಾಡಿನ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಣೆ ಮಾಡುವ ಲಾರಿಗಳನ್ನು ತಡೆಯುತ್ತಿದೆ. ನಂತರ ಕಬ್ಬಿನ ಕಂತೆಯನ್ನು ಪಡೆದು ಸುಮ್ಮನಾಗುತ್ತಿದೆ. ಇತರೆ ವಾಹನಗಳಗತ್ತ ಕಣ್ಣೆತ್ತಿಯೂ ನೋಡದ ಕಾಡಾನೆ ಕಬ್ಬು ಹಾಗೂ ತರಕಾರಿ ತುಂಬಿದ ವಾಹನಗಳನ್ನೇ ಆಯ್ಕೆ ಮಾಡುತ್ತಿದೆ. ಇದರಿಂದಾಗಿ ಲಾರಿ ಚಾಲಕರು ಪರದಾಡುವಂತಾಗಿದೆ.
ಹಿಂದಿನಿಂದಲೂ ಕಾಡಾನೆಯು ಹೆದ್ದಾರಿ ಬದಿಗೆ ಬಂದಾಗ ಕಬ್ಬಿನ ಲಾರಿಗಳ ಸಿಬ್ಬಂದಿ ಕಬ್ಬಿನ ಕಂತೆ ಎಸೆದು ದಾರಿ ಬಿಡಿಸಿಕೊಂಡು ಹೋಗುತ್ತಿದ್ದರು. ಕಬ್ಬಿನ ರುಚಿ ಕಂಡಿರುವ ಆನೆಯು ಆಗಾಗ್ಗೆ ಹೆದ್ದಾರಿಗೆ ಬಂದು ನಿಂತು ಕಬ್ಬಿನ ಲಾರಿಗಳನ್ನು ತಡೆಯುತ್ತಿದೆ.
ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…
ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…