ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಹೂಗ್ಯಂ ವಲಯದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿದೆ.
ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯಲ್ಲಿ ಬರುವ ಹೂಗ್ಯಂ ವಲಯದ ಸೂಳೆಕೋಬೆ ಗಸ್ತಿನಲ್ಲಿ ಆನೆ ಮೃತಪಟ್ಟಿರುವುದು ಪತ್ತೆಯಾಗಿದೆ. ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿ ವಲಯ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಸಿಕ್ಕ ನಂತರ ಎಸಿಎಫ್ ಶಿವರಾಮು, ವಲಯ ಅರಣ್ಯಾಧಿಕಾರಿ ಪುಟ್ಟರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವ ಆನೆ ಸುಮಾರು 40 ವರ್ಷ ವಯಸ್ಸಿನದ್ದಾಗಿದ್ದು, ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
ಮಲೆ ಮಹದೇಶ್ವರ ವನ್ಯದಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂತೋಷ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಪುಟ್ಟರಾಜು, ಪಶು ವೈದ್ಯಾಧಿಕಾರಿ ಡಾ.ಸಿದ್ದರಾಜು ಅವರ ಸಮ್ಮುಖದಲ್ಲಿ ಹೆಣ್ಣಾನೆಯ ಕಳೇಬರವನ್ನು ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…