ಚಾಮರಾಜನಗರ

ಹೂಗ್ಯಂ ವಲಯ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಹೂಗ್ಯಂ ವಲಯದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿದೆ.

ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯಲ್ಲಿ ಬರುವ ಹೂಗ್ಯಂ ವಲಯದ ಸೂಳೆಕೋಬೆ ಗಸ್ತಿನಲ್ಲಿ ಆನೆ ಮೃತಪಟ್ಟಿರುವುದು ಪತ್ತೆಯಾಗಿದೆ. ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿ ವಲಯ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಸಿಕ್ಕ ನಂತರ ಎಸಿಎಫ್ ಶಿವರಾಮು, ವಲಯ ಅರಣ್ಯಾಧಿಕಾರಿ ಪುಟ್ಟರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವ ಆನೆ ಸುಮಾರು 40 ವರ್ಷ ವಯಸ್ಸಿನದ್ದಾಗಿದ್ದು, ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಮಲೆ ಮಹದೇಶ್ವರ ವನ್ಯದಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ‌.ಸಂತೋಷ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಪುಟ್ಟರಾಜು, ಪಶು ವೈದ್ಯಾಧಿಕಾರಿ ಡಾ.ಸಿದ್ದರಾಜು ಅವರ ಸಮ್ಮುಖದಲ್ಲಿ ಹೆಣ್ಣಾನೆಯ ಕಳೇಬರವನ್ನು ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

24 mins ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

50 mins ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

2 hours ago

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

3 hours ago

ಬಲಮುರಿ ಕಾವೇರಿ ನದಿಯಲ್ಲಿ ಇಬ್ಬರು ಯುವಕರು ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ…

3 hours ago

ಓದುಗರ ಪತ್ರ: ಮಾನಸ ಗಂಗೋತ್ರಿ ಕ್ಯಾಂಟೀನ್‌ಗಳಲ್ಲಿ ದರ ಏರಿಕೆಗೆ ಕಡಿವಾಣ ಹಾಕಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಖಾಸಗಿ ಹೋಟೆಲ್‌ಗಳಲ್ಲಿ ಕಾಫಿ,ತಿಂಡಿ, ಹಣ್ಣಿನ ಪಾನೀಯ ದರ ದುಬಾರಿಯಾಗಿದ್ದು, ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುವ…

5 hours ago