ಗುಂಡ್ಲಪೇಟೆ : ಅರಣ್ಯದಿಂದ ಬಂದಿದ್ದ ಕಾಡಾನೆಯನ್ನು ಕಾಡಿಗೆ ಹಿಮ್ಮೆಟ್ಟಿಸುವಲ್ಲಿ ಅರನ್ಯ ಸಿಬ್ಬಂದಿ ಯಶಸ್ವಿ.
ಬಂಡೀಪುರ ಅರಣ್ಯ ಕಡೆಯಿಂದ ಕಾಡಾನೆ ಒಂದು ಹೊಮ್ಮರಗಳ್ಳಿ ಮಾರ್ಗವಾಗಿ ಮೈಸೂರು ವಲಯದ ಚಿಕ್ಕನಹಳ್ಳಿ ಮೀಸಲು ಅರಣ್ಯಕ್ಕೆ ಬಂದು ಬೀಡು ಬಿಟ್ಟು ರಾತ್ರಿ ವೇಳೆ ರೈತರ ಜಮೀನುಗಳಿಗೆ ಹೋಗಿ ಬೆಳೆ ಹಾನಿ ಮಾಡುತ್ತಿತ್ತು.
ಈ ಕಾಡಾನೆಯನ್ನು ಮರಳಿ ಕಾಡಿಗೆ ಹಿಮ್ಮೆಟ್ಟಿಸುವ ಸಲುವಾಗಿ ದಿನಾಂಕ 16-04-2024 ರಿಂದ 24-04-2024 ರ ವರೆಗೆ ETF LTF ಸಿಬ್ಬಂದಿಗಳ ನೆರವಿನಿಂದ ನಿರಂತರ ಕಾರ್ಯಚರಣೆ ನಡೆಸಿದರೂ ಫಲಪ್ರದವಾಗದ ಕಾರಣ ದಿನಾಂಕ 25-04-2024 ರಂದು ಬಂಡೀಪುರದ ಆನೆ ಶಿಬಿರದಿಂದ ಸಾಕಾನೆ ಜಯಪ್ರಕಾಶ್ ಮತ್ತು ಪಾರ್ಥಸಾರಥಿ ಗಳನ್ನು ಬಳಸಿಕೊಂಡು ದಿನಾಂಕ 26-04-2024 ರ ಬೆಳಗಿನ ಜಾವ ಕಾಡಾನೆಯನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಹಿಮ್ಮೆಟ್ಟಿಸಲಾಗಿದೆ.
ಲೋಕಸಭಾ ಚುನಾವಣೆ ಇದ್ದುದ್ದರಿಂದ ಮತದಾನ ಪ್ರಕ್ರಿಯೆಗೆ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತ ಕ್ರಮ ವಹಿಸಿ ರಾತ್ರಿ ವೇಳೆ ಕಾರ್ಯಾಚರಣೆ ನಡೆಸಲಾಯಿತು, ಚಿಕ್ಕನಹಳ್ಳಿ ಮೀಸಲು ಅರಣ್ಯದ ಸುತ್ತಲಿನ ಗ್ರಾಮಗಳಲ್ಲಿ ಹಾಗೂ ಕಾಡಾನೆ ನಡೆದುಹೋಗುವ ಗ್ರಾಮಗಳಲ್ಲಿ ಜನರು ಹೊರಬರದಂತೆ ಮುಂಚಿತವಾಗಿ ಪ್ರಚಾರಮಾಡಿ ತಿಳಿಸುವ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿತ್ತು.
ಅಲ್ಲದೇ ಮೈಸೂರು-ಮಾನಂದವಾಡಿ ಮುಖ್ಯ ರಸ್ತೆಯನ್ನು ಮಧ್ಯ ರಾತ್ರಿ ಬ್ಲಾಕ್ ಮಾಡಿ ಕಾಡಾನೆ ಸುರಕ್ಷಿತವಾಗಿ ರಸ್ತೆ ದಾಟಲು ಅನುವು ಮಾಡಿಕೊಡಲಾಯಿತು.
ಕಾರ್ಯಚರಣೆಗೆ 55 ಜನ ಸಿಬ್ಬಂದಿಗಳು, ಎರಡು ಸಾಕಾನೆಗಳು, 2 ಸಂಖ್ಯೆ ಥರ್ಮಲ್ ಡ್ರೋನ್ ಕ್ಯಾಮರಾಗಳನ್ನು ಬಳಸಿಕೊಳ್ಳಲಾಯಿತು.
ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಮೈಸೂರು ವಿಭಾಗ ರವರ ನೇತೃತ್ವದಲ್ಲಿ ACF ಮೈಸೂರು & ಹೆಚ್.ಡಿ. ಕೋಟೆ, RFO ಮೈಸೂರು & ನಂಜನಗೂಡು ರವರು ಆನೆ ಕಾರ್ಯಪಡೆ ,ಚಿರತೆ ಕಾರ್ಯಪಡೆ, ಮೈಸೂರು, ಸರಗೂರು ಮತ್ತು ನಂಜನಗೂಡು ವಲಯದ ಸಿಬ್ಬಂದಿಗಳ 55 ಜನರ ತಂಡದೊಂದಿಗೆ ಯಶಸ್ವಿ ಕಾರ್ಯಚರಣೆ ನಡೆಸಲಾಯಿತು.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…