ಚಾಮರಾಜನಗರ

ಬಂಡೀಪುರ ಅರಣ್ಯದಲ್ಲಿ ಕಾಡಾನೆ ಹಿಮ್ಮೆಟ್ಟಿಸುವ ಕಾರ್ಯಾಚರಣೆ !

ಗುಂಡ್ಲಪೇಟೆ : ಅರಣ್ಯದಿಂದ ಬಂದಿದ್ದ ಕಾಡಾನೆಯನ್ನು ಕಾಡಿಗೆ ಹಿಮ್ಮೆಟ್ಟಿಸುವಲ್ಲಿ ಅರನ್ಯ ಸಿಬ್ಬಂದಿ ಯಶಸ್ವಿ.

ಬಂಡೀಪುರ ಅರಣ್ಯ ಕಡೆಯಿಂದ ಕಾಡಾನೆ ಒಂದು ಹೊಮ್ಮರಗಳ್ಳಿ ಮಾರ್ಗವಾಗಿ ಮೈಸೂರು ವಲಯದ ಚಿಕ್ಕನಹಳ್ಳಿ ಮೀಸಲು ಅರಣ್ಯಕ್ಕೆ ಬಂದು ಬೀಡು ಬಿಟ್ಟು ರಾತ್ರಿ ವೇಳೆ ರೈತರ ಜಮೀನುಗಳಿಗೆ ಹೋಗಿ ಬೆಳೆ ಹಾನಿ ಮಾಡುತ್ತಿತ್ತು.

ಈ ಕಾಡಾನೆಯನ್ನು ಮರಳಿ ಕಾಡಿಗೆ ಹಿಮ್ಮೆಟ್ಟಿಸುವ ಸಲುವಾಗಿ ದಿನಾಂಕ 16-04-2024 ರಿಂದ 24-04-2024 ರ ವರೆಗೆ ETF LTF ಸಿಬ್ಬಂದಿಗಳ ನೆರವಿನಿಂದ ನಿರಂತರ ಕಾರ್ಯಚರಣೆ ನಡೆಸಿದರೂ ಫಲಪ್ರದವಾಗದ ಕಾರಣ ದಿನಾಂಕ 25-04-2024 ರಂದು ಬಂಡೀಪುರದ ಆನೆ ಶಿಬಿರದಿಂದ ಸಾಕಾನೆ ಜಯಪ್ರಕಾಶ್ ಮತ್ತು ಪಾರ್ಥಸಾರಥಿ ಗಳನ್ನು ಬಳಸಿಕೊಂಡು ದಿನಾಂಕ 26-04-2024 ರ ಬೆಳಗಿನ ಜಾವ ಕಾಡಾನೆಯನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಹಿಮ್ಮೆಟ್ಟಿಸಲಾಗಿದೆ.

ಲೋಕಸಭಾ ಚುನಾವಣೆ ಇದ್ದುದ್ದರಿಂದ ಮತದಾನ ಪ್ರಕ್ರಿಯೆಗೆ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತ ಕ್ರಮ ವಹಿಸಿ ರಾತ್ರಿ ವೇಳೆ ಕಾರ್ಯಾಚರಣೆ ನಡೆಸಲಾಯಿತು, ಚಿಕ್ಕನಹಳ್ಳಿ ಮೀಸಲು ಅರಣ್ಯದ ಸುತ್ತಲಿನ ಗ್ರಾಮಗಳಲ್ಲಿ ಹಾಗೂ ಕಾಡಾನೆ ನಡೆದುಹೋಗುವ ಗ್ರಾಮಗಳಲ್ಲಿ ಜನರು ಹೊರಬರದಂತೆ ಮುಂಚಿತವಾಗಿ ಪ್ರಚಾರಮಾಡಿ ತಿಳಿಸುವ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿತ್ತು.

ಅಲ್ಲದೇ ಮೈಸೂರು-ಮಾನಂದವಾಡಿ ಮುಖ್ಯ ರಸ್ತೆಯನ್ನು ಮಧ್ಯ ರಾತ್ರಿ ಬ್ಲಾಕ್ ಮಾಡಿ ಕಾಡಾನೆ ಸುರಕ್ಷಿತವಾಗಿ ರಸ್ತೆ ದಾಟಲು ಅನುವು ಮಾಡಿಕೊಡಲಾಯಿತು.

ಕಾರ್ಯಚರಣೆಗೆ 55 ಜನ ಸಿಬ್ಬಂದಿಗಳು, ಎರಡು ಸಾಕಾನೆಗಳು, 2 ಸಂಖ್ಯೆ ಥರ್ಮಲ್ ಡ್ರೋನ್ ಕ್ಯಾಮರಾಗಳನ್ನು ಬಳಸಿಕೊಳ್ಳಲಾಯಿತು.

ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಮೈಸೂರು ವಿಭಾಗ ರವರ ನೇತೃತ್ವದಲ್ಲಿ ACF ಮೈಸೂರು & ಹೆಚ್.ಡಿ. ಕೋಟೆ, RFO ಮೈಸೂರು & ನಂಜನಗೂಡು ರವರು ಆನೆ ಕಾರ್ಯಪಡೆ ,ಚಿರತೆ ಕಾರ್ಯಪಡೆ, ಮೈಸೂರು, ಸರಗೂರು ಮತ್ತು ನಂಜನಗೂಡು ವಲಯದ ಸಿಬ್ಬಂದಿಗಳ 55 ಜನರ ತಂಡದೊಂದಿಗೆ ಯಶಸ್ವಿ ಕಾರ್ಯಚರಣೆ ನಡೆಸಲಾಯಿತು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

6 mins ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

31 mins ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

57 mins ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

2 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

2 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

5 hours ago