ಚಾಮರಾಜನಗರ

ಬಂಡೀಪುರ ಅರಣ್ಯದಲ್ಲಿ ಕಾಡಾನೆ ಹಿಮ್ಮೆಟ್ಟಿಸುವ ಕಾರ್ಯಾಚರಣೆ !

ಗುಂಡ್ಲಪೇಟೆ : ಅರಣ್ಯದಿಂದ ಬಂದಿದ್ದ ಕಾಡಾನೆಯನ್ನು ಕಾಡಿಗೆ ಹಿಮ್ಮೆಟ್ಟಿಸುವಲ್ಲಿ ಅರನ್ಯ ಸಿಬ್ಬಂದಿ ಯಶಸ್ವಿ.

ಬಂಡೀಪುರ ಅರಣ್ಯ ಕಡೆಯಿಂದ ಕಾಡಾನೆ ಒಂದು ಹೊಮ್ಮರಗಳ್ಳಿ ಮಾರ್ಗವಾಗಿ ಮೈಸೂರು ವಲಯದ ಚಿಕ್ಕನಹಳ್ಳಿ ಮೀಸಲು ಅರಣ್ಯಕ್ಕೆ ಬಂದು ಬೀಡು ಬಿಟ್ಟು ರಾತ್ರಿ ವೇಳೆ ರೈತರ ಜಮೀನುಗಳಿಗೆ ಹೋಗಿ ಬೆಳೆ ಹಾನಿ ಮಾಡುತ್ತಿತ್ತು.

ಈ ಕಾಡಾನೆಯನ್ನು ಮರಳಿ ಕಾಡಿಗೆ ಹಿಮ್ಮೆಟ್ಟಿಸುವ ಸಲುವಾಗಿ ದಿನಾಂಕ 16-04-2024 ರಿಂದ 24-04-2024 ರ ವರೆಗೆ ETF LTF ಸಿಬ್ಬಂದಿಗಳ ನೆರವಿನಿಂದ ನಿರಂತರ ಕಾರ್ಯಚರಣೆ ನಡೆಸಿದರೂ ಫಲಪ್ರದವಾಗದ ಕಾರಣ ದಿನಾಂಕ 25-04-2024 ರಂದು ಬಂಡೀಪುರದ ಆನೆ ಶಿಬಿರದಿಂದ ಸಾಕಾನೆ ಜಯಪ್ರಕಾಶ್ ಮತ್ತು ಪಾರ್ಥಸಾರಥಿ ಗಳನ್ನು ಬಳಸಿಕೊಂಡು ದಿನಾಂಕ 26-04-2024 ರ ಬೆಳಗಿನ ಜಾವ ಕಾಡಾನೆಯನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಹಿಮ್ಮೆಟ್ಟಿಸಲಾಗಿದೆ.

ಲೋಕಸಭಾ ಚುನಾವಣೆ ಇದ್ದುದ್ದರಿಂದ ಮತದಾನ ಪ್ರಕ್ರಿಯೆಗೆ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತ ಕ್ರಮ ವಹಿಸಿ ರಾತ್ರಿ ವೇಳೆ ಕಾರ್ಯಾಚರಣೆ ನಡೆಸಲಾಯಿತು, ಚಿಕ್ಕನಹಳ್ಳಿ ಮೀಸಲು ಅರಣ್ಯದ ಸುತ್ತಲಿನ ಗ್ರಾಮಗಳಲ್ಲಿ ಹಾಗೂ ಕಾಡಾನೆ ನಡೆದುಹೋಗುವ ಗ್ರಾಮಗಳಲ್ಲಿ ಜನರು ಹೊರಬರದಂತೆ ಮುಂಚಿತವಾಗಿ ಪ್ರಚಾರಮಾಡಿ ತಿಳಿಸುವ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿತ್ತು.

ಅಲ್ಲದೇ ಮೈಸೂರು-ಮಾನಂದವಾಡಿ ಮುಖ್ಯ ರಸ್ತೆಯನ್ನು ಮಧ್ಯ ರಾತ್ರಿ ಬ್ಲಾಕ್ ಮಾಡಿ ಕಾಡಾನೆ ಸುರಕ್ಷಿತವಾಗಿ ರಸ್ತೆ ದಾಟಲು ಅನುವು ಮಾಡಿಕೊಡಲಾಯಿತು.

ಕಾರ್ಯಚರಣೆಗೆ 55 ಜನ ಸಿಬ್ಬಂದಿಗಳು, ಎರಡು ಸಾಕಾನೆಗಳು, 2 ಸಂಖ್ಯೆ ಥರ್ಮಲ್ ಡ್ರೋನ್ ಕ್ಯಾಮರಾಗಳನ್ನು ಬಳಸಿಕೊಳ್ಳಲಾಯಿತು.

ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಮೈಸೂರು ವಿಭಾಗ ರವರ ನೇತೃತ್ವದಲ್ಲಿ ACF ಮೈಸೂರು & ಹೆಚ್.ಡಿ. ಕೋಟೆ, RFO ಮೈಸೂರು & ನಂಜನಗೂಡು ರವರು ಆನೆ ಕಾರ್ಯಪಡೆ ,ಚಿರತೆ ಕಾರ್ಯಪಡೆ, ಮೈಸೂರು, ಸರಗೂರು ಮತ್ತು ನಂಜನಗೂಡು ವಲಯದ ಸಿಬ್ಬಂದಿಗಳ 55 ಜನರ ತಂಡದೊಂದಿಗೆ ಯಶಸ್ವಿ ಕಾರ್ಯಚರಣೆ ನಡೆಸಲಾಯಿತು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

1 hour ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

1 hour ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

1 hour ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

2 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

2 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

2 hours ago