ಚಾಮರಾಜನಗರ : ಚಾಮರಾಜನಗರ ಗಡಿಭಾಗದಲ್ಲಿರುವ ಅಚ್ಚ ಕನ್ನಡಿಗರೇ ನೆಲೆಸಿರುವ ತಮಿಳುನಾಡಿನ ಕೊಂಗಳ್ಳಿ ಗ್ರಾಮಕ್ಕೆ ಒಂಟಿ ಆನೆಯೊಂದು ಮಂಗಳವಾರ ಬೆಳಿಗ್ಗೆ 7 ಗಂಟೆಯಲ್ಲಿ ನುಗ್ಗಿ ಗ್ರಾಮದಲ್ಲಿ ಕೆಲಕಾಲ ಆತಂಕ ಉಂಟು ಮಾಡಿತು.
ಆನೆ ಗ್ರಾಮಕ್ಕೆ ಪ್ರವೇಶಿಸಿ ಘೀಳು ಹಾಕುತ್ತಾ ಪ್ರಮುಖ ಬೀದಿಗಳಲ್ಲಿ ಅಡ್ಡಾಡಿದ್ದರಿಂದ ಗ್ರಾಮಸ್ಥರು ವಿಚಲಿತರಾಗಿ ಕೂಗಾಡಿಕೊಂಡು ಮನೆಗಳತ್ತ ದಿಕ್ಕಾಪಾಲಾಗಿ ಓಡಿದರು. ಜನರ ಕೂಗಾಟದಿಂದ ಬೆದರಿ ಆನೆಯೂ ಕೊಂಗಳ್ಳಿ ಬೆಟ್ಟದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಕಡೆಯಿಂದ ಕಾಡಿನತ್ತ ಹೋಯಿತು ಎಂದು ಕೊಂಗಳ್ಳಿ ಮಠದ ಸದಾಶಿವ ಸ್ವಾಮೀಜಿ ಮಾಹಿತಿ ನೀಡಿದರು.
ಆನೆ ಆರ್ಭಟ ಮಾಡಿಕೊಂಡೇ ಊರ ಒಳಗಡೆ ಬಂದಿತು. ಆದರೆ, ಯಾವುದೇ ಹಾನಿ ಮಾಡಲಿಲ್ಲ. ಕೊಂಗಳ್ಳಿ ಸನಿಹದ ಪಾಳ್ಯದ ರಾಚ ಎಂಬವರಿಗೆ ಸೇರಿದ ಸುಮಾರು ಒಂದು ಎಕರೆ ರಾಗಿ ಫಸಲನ್ನು ಸಂಪೂರ್ಣ ನಾಶ ಮಾಡಿದೆ ಎಂದು ಅವರು ಹೇಳಿದರು.
ಗ್ರಾಮಕ್ಕೆ ಕಾಡಾನೆ ನುಗ್ಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಸುಗಳು ಆನೆ ಕಂಡು ಬೆದರಿರುವುದು ಕಂಡುಬಂದಿದೆ.
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…
ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ…
ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ…