ಚಾಮರಾಜನಗರ : ಚಾಮರಾಜನಗರ ಗಡಿಭಾಗದಲ್ಲಿರುವ ಅಚ್ಚ ಕನ್ನಡಿಗರೇ ನೆಲೆಸಿರುವ ತಮಿಳುನಾಡಿನ ಕೊಂಗಳ್ಳಿ ಗ್ರಾಮಕ್ಕೆ ಒಂಟಿ ಆನೆಯೊಂದು ಮಂಗಳವಾರ ಬೆಳಿಗ್ಗೆ 7 ಗಂಟೆಯಲ್ಲಿ ನುಗ್ಗಿ ಗ್ರಾಮದಲ್ಲಿ ಕೆಲಕಾಲ ಆತಂಕ ಉಂಟು ಮಾಡಿತು.
ಆನೆ ಗ್ರಾಮಕ್ಕೆ ಪ್ರವೇಶಿಸಿ ಘೀಳು ಹಾಕುತ್ತಾ ಪ್ರಮುಖ ಬೀದಿಗಳಲ್ಲಿ ಅಡ್ಡಾಡಿದ್ದರಿಂದ ಗ್ರಾಮಸ್ಥರು ವಿಚಲಿತರಾಗಿ ಕೂಗಾಡಿಕೊಂಡು ಮನೆಗಳತ್ತ ದಿಕ್ಕಾಪಾಲಾಗಿ ಓಡಿದರು. ಜನರ ಕೂಗಾಟದಿಂದ ಬೆದರಿ ಆನೆಯೂ ಕೊಂಗಳ್ಳಿ ಬೆಟ್ಟದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಕಡೆಯಿಂದ ಕಾಡಿನತ್ತ ಹೋಯಿತು ಎಂದು ಕೊಂಗಳ್ಳಿ ಮಠದ ಸದಾಶಿವ ಸ್ವಾಮೀಜಿ ಮಾಹಿತಿ ನೀಡಿದರು.
ಆನೆ ಆರ್ಭಟ ಮಾಡಿಕೊಂಡೇ ಊರ ಒಳಗಡೆ ಬಂದಿತು. ಆದರೆ, ಯಾವುದೇ ಹಾನಿ ಮಾಡಲಿಲ್ಲ. ಕೊಂಗಳ್ಳಿ ಸನಿಹದ ಪಾಳ್ಯದ ರಾಚ ಎಂಬವರಿಗೆ ಸೇರಿದ ಸುಮಾರು ಒಂದು ಎಕರೆ ರಾಗಿ ಫಸಲನ್ನು ಸಂಪೂರ್ಣ ನಾಶ ಮಾಡಿದೆ ಎಂದು ಅವರು ಹೇಳಿದರು.
ಗ್ರಾಮಕ್ಕೆ ಕಾಡಾನೆ ನುಗ್ಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಸುಗಳು ಆನೆ ಕಂಡು ಬೆದರಿರುವುದು ಕಂಡುಬಂದಿದೆ.
ಮಂಡ್ಯ: ದೇಶದಲ್ಲೆ ಮಂಡ್ಯ ಜಿಲ್ಲೆಯ ಪರಿಚಯ ಇದ್ದರೂ ಮಂಡ್ಯ ಜಿಲ್ಲೆಯೂ ಇನ್ನೂ ಹೆಚ್ಚಿನ ರೀತಿಯಲ್ಲಿ ಹಾಗೂ ಸಂಪೂರ್ಣವಾಗಿ ಅಭಿವೃದ್ಧಿ ಆಗಬೇಕು.…
ಬೆಂಗಳೂರು: ಖ್ಯಾತ ನಟ ಜೂನಿಯರ್ ಎನ್ಟಿಆರ್ ಅವರಿಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಆಸ್ಪತ್ರೆಯೊಂದರ ಉದ್ಘಾಟನೆಗೆ…
ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಭೀಖರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕನಕಪುರ…
ಕುವೈತ್ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್ ಅಂತರಾಷ್ಟ್ರೀಯ…
ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ…
ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ…