ಚಾಮರಾಜನಗರ : ಚಾಮರಾಜನಗರ ಗಡಿಭಾಗದಲ್ಲಿರುವ ಅಚ್ಚ ಕನ್ನಡಿಗರೇ ನೆಲೆಸಿರುವ ತಮಿಳುನಾಡಿನ ಕೊಂಗಳ್ಳಿ ಗ್ರಾಮಕ್ಕೆ ಒಂಟಿ ಆನೆಯೊಂದು ಮಂಗಳವಾರ ಬೆಳಿಗ್ಗೆ 7 ಗಂಟೆಯಲ್ಲಿ ನುಗ್ಗಿ ಗ್ರಾಮದಲ್ಲಿ ಕೆಲಕಾಲ ಆತಂಕ ಉಂಟು ಮಾಡಿತು.
ಆನೆ ಗ್ರಾಮಕ್ಕೆ ಪ್ರವೇಶಿಸಿ ಘೀಳು ಹಾಕುತ್ತಾ ಪ್ರಮುಖ ಬೀದಿಗಳಲ್ಲಿ ಅಡ್ಡಾಡಿದ್ದರಿಂದ ಗ್ರಾಮಸ್ಥರು ವಿಚಲಿತರಾಗಿ ಕೂಗಾಡಿಕೊಂಡು ಮನೆಗಳತ್ತ ದಿಕ್ಕಾಪಾಲಾಗಿ ಓಡಿದರು. ಜನರ ಕೂಗಾಟದಿಂದ ಬೆದರಿ ಆನೆಯೂ ಕೊಂಗಳ್ಳಿ ಬೆಟ್ಟದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಕಡೆಯಿಂದ ಕಾಡಿನತ್ತ ಹೋಯಿತು ಎಂದು ಕೊಂಗಳ್ಳಿ ಮಠದ ಸದಾಶಿವ ಸ್ವಾಮೀಜಿ ಮಾಹಿತಿ ನೀಡಿದರು.
ಆನೆ ಆರ್ಭಟ ಮಾಡಿಕೊಂಡೇ ಊರ ಒಳಗಡೆ ಬಂದಿತು. ಆದರೆ, ಯಾವುದೇ ಹಾನಿ ಮಾಡಲಿಲ್ಲ. ಕೊಂಗಳ್ಳಿ ಸನಿಹದ ಪಾಳ್ಯದ ರಾಚ ಎಂಬವರಿಗೆ ಸೇರಿದ ಸುಮಾರು ಒಂದು ಎಕರೆ ರಾಗಿ ಫಸಲನ್ನು ಸಂಪೂರ್ಣ ನಾಶ ಮಾಡಿದೆ ಎಂದು ಅವರು ಹೇಳಿದರು.
ಗ್ರಾಮಕ್ಕೆ ಕಾಡಾನೆ ನುಗ್ಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಸುಗಳು ಆನೆ ಕಂಡು ಬೆದರಿರುವುದು ಕಂಡುಬಂದಿದೆ.
ಮೈಸೂರು: ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿಉರಿದಿದ್ದು,ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…
ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…
ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…
ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…
ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…
ಬೆಂಗಳೂರು : ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್ ಅವರು ಹತ್ತು…