ಚಾಮರಾಜನಗರ : ಚಾಮರಾಜನಗರ ಗಡಿಭಾಗದಲ್ಲಿರುವ ಅಚ್ಚ ಕನ್ನಡಿಗರೇ ನೆಲೆಸಿರುವ ತಮಿಳುನಾಡಿನ ಕೊಂಗಳ್ಳಿ ಗ್ರಾಮಕ್ಕೆ ಒಂಟಿ ಆನೆಯೊಂದು ಮಂಗಳವಾರ ಬೆಳಿಗ್ಗೆ 7 ಗಂಟೆಯಲ್ಲಿ ನುಗ್ಗಿ ಗ್ರಾಮದಲ್ಲಿ ಕೆಲಕಾಲ ಆತಂಕ ಉಂಟು ಮಾಡಿತು.
ಆನೆ ಗ್ರಾಮಕ್ಕೆ ಪ್ರವೇಶಿಸಿ ಘೀಳು ಹಾಕುತ್ತಾ ಪ್ರಮುಖ ಬೀದಿಗಳಲ್ಲಿ ಅಡ್ಡಾಡಿದ್ದರಿಂದ ಗ್ರಾಮಸ್ಥರು ವಿಚಲಿತರಾಗಿ ಕೂಗಾಡಿಕೊಂಡು ಮನೆಗಳತ್ತ ದಿಕ್ಕಾಪಾಲಾಗಿ ಓಡಿದರು. ಜನರ ಕೂಗಾಟದಿಂದ ಬೆದರಿ ಆನೆಯೂ ಕೊಂಗಳ್ಳಿ ಬೆಟ್ಟದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಕಡೆಯಿಂದ ಕಾಡಿನತ್ತ ಹೋಯಿತು ಎಂದು ಕೊಂಗಳ್ಳಿ ಮಠದ ಸದಾಶಿವ ಸ್ವಾಮೀಜಿ ಮಾಹಿತಿ ನೀಡಿದರು.
ಆನೆ ಆರ್ಭಟ ಮಾಡಿಕೊಂಡೇ ಊರ ಒಳಗಡೆ ಬಂದಿತು. ಆದರೆ, ಯಾವುದೇ ಹಾನಿ ಮಾಡಲಿಲ್ಲ. ಕೊಂಗಳ್ಳಿ ಸನಿಹದ ಪಾಳ್ಯದ ರಾಚ ಎಂಬವರಿಗೆ ಸೇರಿದ ಸುಮಾರು ಒಂದು ಎಕರೆ ರಾಗಿ ಫಸಲನ್ನು ಸಂಪೂರ್ಣ ನಾಶ ಮಾಡಿದೆ ಎಂದು ಅವರು ಹೇಳಿದರು.
ಗ್ರಾಮಕ್ಕೆ ಕಾಡಾನೆ ನುಗ್ಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಸುಗಳು ಆನೆ ಕಂಡು ಬೆದರಿರುವುದು ಕಂಡುಬಂದಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…