ಚಾಮರಾಜನಗರ

ಗಾಜನೂರಲ್ಲಿ ಕಾಡಾನೆ ಹಾವಳಿ : ಬೆಳೆ ನಷ್ಟ

ಹನೂರು : ತಾಲ್ಲೂಕಿನ ಗಾಜನೂರು ಗ್ರಾಮದಲ್ಲಿ ಕಾಡಾನೆಗಳ ಹಾವಳಿಯಿಂದ ರೈತರಿಗೆ ಭಾರೀ ನಷ್ಟ ಉಂಟಾಗಿದೆ.

ಗುರುವಾರ ತಡರಾತ್ರಿ ಕಾಡಾನೆಗಳು ದಾಳಿ ನಡೆಸಿ, ರೈತ ಕಾಮರಾಜು ಎಂಬವರ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಫಸಲನ್ನು ಸಂಪೂರ್ಣವಾಗಿ ನಾಶಪಡಿಸಿವೆ.

ಅರಣ್ಯದಿಂದ ಆಗಮಿಸಿದ ಕಾಡಾನೆಗಳು ಜಮೀನಿಗೆ ನುಗ್ಗಿ ಹಲವಾರು ಬಾಳೆ ಗಿಡಗಳನ್ನು ಮುರಿದು ಹಾಕಿ, ತುಳಿದು ನಾಶ ಪಡಿಸಿವೆ. ಇದರಿಂದ ರೈತರಿಗೆ ಲಕ್ಷಾಂತರ ರೂ. ನಷ್ಟ ಉಂಟಾಗಿದೆ.

ಈ ಘಟನೆ ಬಗ್ಗೆ ಸಂಬಂಧಿತ ಅರಣ್ಯ ಇಲಾಖೆ ಯಾವುದೇ ತುರ್ತು ಕ್ರಮ ಕೈಗೊಂಡಿಲ್ಲ ಎನ್ನುವ ಆರೋಪ ಸ್ಥಳೀಯರಿಂದ ಕೇಳಿಬರುತ್ತಿದೆ. ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಸೂಕ್ತ ರಕ್ಷಣೆ ಮತ್ತು ಪರಿಹಾರ ಒದಗಿಸುವಂತೆ ಆಗ್ರಹಿಸಿದ್ದಾರೆ. ಕಾಡಾನೆಗಳು ದಿನೇ ದಿನೇ ಜಮೀನುಗಳಲ್ಲಿ ದಾಳಿ ನಡೆಸುತ್ತಿದ್ದರೂ ಅರಣ್ಯ ಇಲಾಖೆ ಮೌನವಾಗಿದ್ದು, ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

16 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

16 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago