Mysore
23
light rain

Social Media

ಮಂಗಳವಾರ, 24 ಫೆಬ್ರವರಿ 2026
Light
Dark

ಆನೆ ನೋಡಿ ಬೈಕಿ ನಿಂದ ಕೆಳಗೆ ಬಿದ್ದ ವ್ಯಕ್ತಿ

ಚಾಮರಾಜನಗರ : ಆನೆ ದಾಳಿ ಮಾಡುತ್ತದೆ ಎಂಬ ಭಯದಲ್ಲಿ ಬೈಕ್ ಸವಾರ ರಸ್ತೆ ಪಕ್ಕದ ಕಾಲುವೆಗೆ ಬಿದ್ದಿರುವ ಘಟನೆ ಚಾಮರಾಜನಗರ ಗಡಿ ಭಾಗವಾದ ತಮಿಳುನಾಡಿನ ತಲೆಮಲೈಯಲ್ಲಿ ನಡೆದಿದೆ.
ನೈನಿತಾಳಪುರಂ ಗ್ರಾಮದರಾಮಸ್ವಾಮಿ ಎಂಬವರು ಕಾಲುವೆಗೆ ಬಿದ್ದಿರುವ ಬೈಕ್ ಸವಾರ, ರಸ್ತೆ ಮಧ್ಯೆ ಬಂದು ನಿಂತ ಆನೆಯನ್ನು ಗಮನಿಸಿದ ರಾಮಸ್ವಾಮಿ ದಿಢೀರ್ ಬಂದಿದ್ದಾರೆ.

ಆನೆ ನೋಡುತ್ತಿದ್ದಂತೆ ಗಾಬರಿಗೊಂಡು ಆಯತಪ್ಪಿ ಬಿದ್ದಿದ್ದು, ಬಳಿಕ ಇನ್ನಿತರ ಸವಾರರ ಸಮಯ ಪ್ರಜ್ಞೆಯಿಂದ ಆನೆ ತಿರುಗುವ ಮುನ್ನಇತ್ತಕಡೆ ಬಂದಿದ್ದಾರೆ.

ಈ ಘಟನೆ ಸೋಮವಾರ ಸಂಜೆ ನಡೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಚಾಮರಾಜನಗರ ಗಡಿಭಾಗದಲ್ಲಿ ಆನೆಗಳು ಹೆಚ್ಚಾಗಿ ಕಾಣಿಸಿಕೊಳ್ಳಯತ್ತಿವೆ. ಆದರೆ ಈವರೆಗೆ ಪ್ರಾಣಹಾನಿಯ ಬಗ್ಗೆ ವರದಿಗಳಾಗಿಲ್ಲ. ಇತ್ತೀಚೆಗೆ ತಮಿಳುನಾಡಿನ ತಲೆಮಲೈಯಲ್ಲಿ ರೈಲು ಹಳಿ ದಾಟುವ ವೇಳೆ ಆನೆ ಕೂದಲೆಳೆ ಅಂತರದಲ್ಲಿ ಪಾರಾಗಿರುವುದುಕಂಡು ಬಂದಿತ್ತು.

ಕೃಷಿಗೆ ಹಾನಿ ಮಾಡುತ್ತಿದ್ದ ಆನೆಯನ್ನು ತೋಟದಿಂದ ಓಡಿಸಲಾಗುತ್ತಿತ್ತು. ಆಗ ಆನೆ ಹಳಿ ಮೇಲೆ ನಿಂತಿತ್ತು. ರೈಲು ಬರುತ್ತಿರುವುದನ್ನು ಗಮನಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ತಕ್ಷಣವೇ ಆನೆಯನ್ನು ಓಡಿಸಿ ಉಳಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!