ಚಾಮರಾಜನಗರ

ಆನೆ ನೋಡಿ ಬೈಕಿ ನಿಂದ ಕೆಳಗೆ ಬಿದ್ದ ವ್ಯಕ್ತಿ

ಚಾಮರಾಜನಗರ : ಆನೆ ದಾಳಿ ಮಾಡುತ್ತದೆ ಎಂಬ ಭಯದಲ್ಲಿ ಬೈಕ್ ಸವಾರ ರಸ್ತೆ ಪಕ್ಕದ ಕಾಲುವೆಗೆ ಬಿದ್ದಿರುವ ಘಟನೆ ಚಾಮರಾಜನಗರ ಗಡಿ ಭಾಗವಾದ ತಮಿಳುನಾಡಿನ ತಲೆಮಲೈಯಲ್ಲಿ ನಡೆದಿದೆ.
ನೈನಿತಾಳಪುರಂ ಗ್ರಾಮದರಾಮಸ್ವಾಮಿ ಎಂಬವರು ಕಾಲುವೆಗೆ ಬಿದ್ದಿರುವ ಬೈಕ್ ಸವಾರ, ರಸ್ತೆ ಮಧ್ಯೆ ಬಂದು ನಿಂತ ಆನೆಯನ್ನು ಗಮನಿಸಿದ ರಾಮಸ್ವಾಮಿ ದಿಢೀರ್ ಬಂದಿದ್ದಾರೆ.

ಆನೆ ನೋಡುತ್ತಿದ್ದಂತೆ ಗಾಬರಿಗೊಂಡು ಆಯತಪ್ಪಿ ಬಿದ್ದಿದ್ದು, ಬಳಿಕ ಇನ್ನಿತರ ಸವಾರರ ಸಮಯ ಪ್ರಜ್ಞೆಯಿಂದ ಆನೆ ತಿರುಗುವ ಮುನ್ನಇತ್ತಕಡೆ ಬಂದಿದ್ದಾರೆ.

ಈ ಘಟನೆ ಸೋಮವಾರ ಸಂಜೆ ನಡೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಚಾಮರಾಜನಗರ ಗಡಿಭಾಗದಲ್ಲಿ ಆನೆಗಳು ಹೆಚ್ಚಾಗಿ ಕಾಣಿಸಿಕೊಳ್ಳಯತ್ತಿವೆ. ಆದರೆ ಈವರೆಗೆ ಪ್ರಾಣಹಾನಿಯ ಬಗ್ಗೆ ವರದಿಗಳಾಗಿಲ್ಲ. ಇತ್ತೀಚೆಗೆ ತಮಿಳುನಾಡಿನ ತಲೆಮಲೈಯಲ್ಲಿ ರೈಲು ಹಳಿ ದಾಟುವ ವೇಳೆ ಆನೆ ಕೂದಲೆಳೆ ಅಂತರದಲ್ಲಿ ಪಾರಾಗಿರುವುದುಕಂಡು ಬಂದಿತ್ತು.

ಕೃಷಿಗೆ ಹಾನಿ ಮಾಡುತ್ತಿದ್ದ ಆನೆಯನ್ನು ತೋಟದಿಂದ ಓಡಿಸಲಾಗುತ್ತಿತ್ತು. ಆಗ ಆನೆ ಹಳಿ ಮೇಲೆ ನಿಂತಿತ್ತು. ರೈಲು ಬರುತ್ತಿರುವುದನ್ನು ಗಮನಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ತಕ್ಷಣವೇ ಆನೆಯನ್ನು ಓಡಿಸಿ ಉಳಿಸಿದ್ದರು.

andolanait

Recent Posts

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

1 hour ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

1 hour ago

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

4 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

4 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

4 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

4 hours ago