ಚಾಮರಾಜನಗರ : ಆನೆ ದಾಳಿ ಮಾಡುತ್ತದೆ ಎಂಬ ಭಯದಲ್ಲಿ ಬೈಕ್ ಸವಾರ ರಸ್ತೆ ಪಕ್ಕದ ಕಾಲುವೆಗೆ ಬಿದ್ದಿರುವ ಘಟನೆ ಚಾಮರಾಜನಗರ ಗಡಿ ಭಾಗವಾದ ತಮಿಳುನಾಡಿನ ತಲೆಮಲೈಯಲ್ಲಿ ನಡೆದಿದೆ.
ನೈನಿತಾಳಪುರಂ ಗ್ರಾಮದರಾಮಸ್ವಾಮಿ ಎಂಬವರು ಕಾಲುವೆಗೆ ಬಿದ್ದಿರುವ ಬೈಕ್ ಸವಾರ, ರಸ್ತೆ ಮಧ್ಯೆ ಬಂದು ನಿಂತ ಆನೆಯನ್ನು ಗಮನಿಸಿದ ರಾಮಸ್ವಾಮಿ ದಿಢೀರ್ ಬಂದಿದ್ದಾರೆ.
ಆನೆ ನೋಡುತ್ತಿದ್ದಂತೆ ಗಾಬರಿಗೊಂಡು ಆಯತಪ್ಪಿ ಬಿದ್ದಿದ್ದು, ಬಳಿಕ ಇನ್ನಿತರ ಸವಾರರ ಸಮಯ ಪ್ರಜ್ಞೆಯಿಂದ ಆನೆ ತಿರುಗುವ ಮುನ್ನಇತ್ತಕಡೆ ಬಂದಿದ್ದಾರೆ.
ಈ ಘಟನೆ ಸೋಮವಾರ ಸಂಜೆ ನಡೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಚಾಮರಾಜನಗರ ಗಡಿಭಾಗದಲ್ಲಿ ಆನೆಗಳು ಹೆಚ್ಚಾಗಿ ಕಾಣಿಸಿಕೊಳ್ಳಯತ್ತಿವೆ. ಆದರೆ ಈವರೆಗೆ ಪ್ರಾಣಹಾನಿಯ ಬಗ್ಗೆ ವರದಿಗಳಾಗಿಲ್ಲ. ಇತ್ತೀಚೆಗೆ ತಮಿಳುನಾಡಿನ ತಲೆಮಲೈಯಲ್ಲಿ ರೈಲು ಹಳಿ ದಾಟುವ ವೇಳೆ ಆನೆ ಕೂದಲೆಳೆ ಅಂತರದಲ್ಲಿ ಪಾರಾಗಿರುವುದುಕಂಡು ಬಂದಿತ್ತು.
ಕೃಷಿಗೆ ಹಾನಿ ಮಾಡುತ್ತಿದ್ದ ಆನೆಯನ್ನು ತೋಟದಿಂದ ಓಡಿಸಲಾಗುತ್ತಿತ್ತು. ಆಗ ಆನೆ ಹಳಿ ಮೇಲೆ ನಿಂತಿತ್ತು. ರೈಲು ಬರುತ್ತಿರುವುದನ್ನು ಗಮನಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ತಕ್ಷಣವೇ ಆನೆಯನ್ನು ಓಡಿಸಿ ಉಳಿಸಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…