ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪೊಪ್ಪಿಕೊಂಡ ವ್ಯಕ್ತಿ ಈಗ ಅರಣ್ಯ ಇಲಾಖೆಗೆ ದಂಡ ಕಟ್ಟಿದ್ದಾರೆ.
ರಸ್ತೆಗೆ ಬಂದ ಕಾಡಾನೆಯನ್ನು ಕಂಡ ಪ್ರವಾಸಿಗರು ಅದರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ತಿರುಗಿ ಬಂದ ಆನೆಯನ್ನು ಕಂಡು ಪ್ರವಾಸಿಗರು ವಾಪಸ್ ಆಗಿದ್ದರು.
ಆನೆ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಾಣಿಪ್ರಿಯರು ಪ್ರವಾಸಿಗರ ವಿರುದ್ಧ ಕಠಿಣ ಕ್ರಮ ಆಗಲೇಬೇಕು ಎಂದು ಪಟ್ಟು ಹಿಡಿದಿದ್ದರು.
ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಪ್ರವಾಸಿಗರೊಬ್ಬರು ಅರಣ್ಯ ಇಲಾಖೆಗೆ 25 ಸಾವಿರ ದಂಡ ಕಟ್ಟಿ ತಪ್ಪೊಪ್ಪಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ನಾನು ಬಂಡೀಪುರ ಅರಣ್ಯದಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಿದೆ. ಇದು ಕಾನೂನು ಬಾಹಿರ ಎಂದು ಗೊತ್ತಾದ ಮೇಲೆ ದಂಡ ಕಟ್ಟಿದ್ದೇನೆ. ಇನ್ನು ಮುಂದೆ ಈ ರೀತಿಯ ತಪ್ಪನ್ನು ಎಂದಿಗೂ ಮಾಡಲ್ಲ. ಯಾರೂ ಕೂಡ ಕಾಡು ಪ್ರಾಣಿಗಳಿಗೆ ಹಿಂಸೆ ಕೊಡಬೇಡಿ. ಕಾಡಿನೊಳಗೆ ಪ್ಲಾಸ್ಟಿಕ್ಗಳನ್ನು ಎಸೆಯಬಾರದು. ಪ್ರಾಣಿಗಳಿಗೆ ಕಿರಿಕಿರಿ ಉಂಟುಮಾಡಬಾರದು ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…
ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…