ಹನೂರು: ತಾಲ್ಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗಮಧ್ಯದಲ್ಲಿನ ಅರಣ್ಯದಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಮ.ಬೆಟ್ಟಕ್ಕೆ ದ್ವಿಚಕ್ರ ವಾಹನಗಳಲ್ಲಿ ಹಾಗೂ ಪಾದಯಾತ್ರೆಯ ಮೂಲಕ ತೆರಳುವವರು ಮುನ್ನೆಚ್ಚರಿಕೆ ಕ್ರಮ ವಹಿಸಿ ತೆರಳುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ.
ತಾಳಬೆಟ್ಟದಿಂದ ಮ.ಬೆಟ್ಟಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಕಾಡಾನೆಗಳು ಬೆಳಗಿನ ವೇಳೆಯೇ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ವಾಹನ ಸವಾರರು ಆತಂಕದಲ್ಲಿಯೇ ತೆರಳುತ್ತಿದ್ದಾರೆ.
ಭಾನುವಾರ ಮಧ್ಯಾಹ್ನ ಕಾಡಾನೆಯೊಂದು ಮೇವನ್ನು ಅರಸಿ ಬಂದು ರಸ್ತೆ ಬಳಿಯೇ ನಿಂತಿರುವುದನ್ನು ದಾರಿಹೋಕರು ಮೊಬೈಲ್ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
ಒಂದು ತಿಂಗಳಿನಿಂದ ಕಾಡಾನೆಗಳು ನಿರಂತರವಾಗಿ ಮಾರ್ಗ ಮಧ್ಯದಲ್ಲಿಯೇ ಚಲಿಸುತ್ತಿರುವುದು, ಚೆಕ್ ಡ್ಯಾಮ್ನಲ್ಲಿ ಜಲ ಕ್ರೀಡೆಯಲ್ಲಿ ತೊಡಗುವುದು ಮಾಡುತ್ತಿರುವುದರಿಂದ ಮ.ಬೆಟ್ಟ ಹಾಗೂ ಕಾಡಂಚಿನ ಗ್ರಾಮಗಳಿಗೆ ಹೋಗುವ ಸಾರ್ವಜನಿಕರು ಬೆಳಗಿನ ವೇಳೆಯಲ್ಲಿ ಪ್ರಯಾಣ ಮಾಡಬೇಕು. ರಾತ್ರಿಯ ವೇಳೆ ಅನಗತ್ಯವಾಗಿ ಪ್ರಯಾಣ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…