ಚಾಮರಾಜನಗರ

ಕಾರಿನಲ್ಲಿ ಆನೆ ದಂತ ಸಾಗಿಸುತ್ತಿದ್ದ ಮೂವರ ಬಂಧನ

ಚಾಮರಾಜನಗರ: ಕಾರಿನಲ್ಲಿ ಆನೆ ದಂತ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಶಿವಮೂರ್ತಿ, ಶಿವಕುಮಾರ್‌ ಹಾಗೂ ಅಂತೋಣಿ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಆನೆಯ 2 ದಂತ ಹಾಗೂ ಒಂದು ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಮೂವರು ಆರೋಪಿಗಳು ಹಣದ ಆಸೆಗೋಸ್ಕರ ಆನೆ ದಂತಗಳನ್ನು ಕಾರಿನಲ್ಲಿ ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ದಂತಗಳ ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇನ್ನು ಈ ಭಾಗದಲ್ಲಿ ಬೇಟೆಗಾರರ ಹಾವಳಿ ಹೆಚ್ಚಾಗಿದ್ದು, ಇದನ್ನು ತಡೆಯಲು ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟೆಲ್ಲಾ ಪ್ರಕರಣಗಳು ಆದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಿನಲ್ಲಿ ಸೂಕ್ತ ಕಟ್ಟೆಚ್ಚರ ವಹಿಸಬೇಕು ಎಂದು ಪ್ರಾಣಿಪ್ರಿಯರು ಆಗ್ರಹಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಧಾನಸೌಧಕ್ಕೆ ಮತ್ತೆ ಬರೋದು ಭಗವಂತನ ಇಚ್ಛೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…

16 mins ago

ಜುಲೈ.3ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ

ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…

48 mins ago

ಪ್ರಧಾನಿ ಮೋದಿಗೆಂದೇ ಮೈಸೂರು ಮಹಾರಾಜರು ಧರಿಸುತ್ತಿದ್ದ ಮಾದರಿಯ ಪೇಟ ತಯಾರು

ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…

2 hours ago

ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್‌ಗೆ ಬಿಗ್‌ ಟ್ವಿಸ್ಟ್‌

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್‌ ಆರೋಪ…

2 hours ago

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…

2 hours ago

ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಭಾರೀ ಏರಿಕೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…

3 hours ago