ಗುಂಡ್ಲುಪೇಟೆ: ರಾತ್ರೋರಾತ್ರಿ ಕಾಡಾನೆಗಳ ಹಿಂಡು ಜಮೀನಿಗೆ ಲಗ್ಗೆಯಿಟ್ಟ ಪರಿಣಾಮ ರೈತ ಬೆಳೆದ ಜೋಳದ ಫಸಲು ಸಂಪೂರ್ಣ ನಾಶವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹದೇವಸ್ವಾಮಿ ಎಂಬುವವರ 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ಜೋಳ, ತೆಂಗಿನ ಸಸಿಗಳು ಹಾಗೂ ಪೈಪ್ಲೈನ್ನ್ನು ಆನೆಗಳು ತುಳಿದು ಹಾಕಿವೆ.
ಜೋಳದ ಬೆಳೆಯನ್ನು ಸಂಪೂರ್ಣ ನಾಶ ಮಾಡಿದ ಆನೆಗಳು ಬಳಿಕ ಪಕ್ಕದಲ್ಲಿದ್ದ ವೆಂಕಟರಾಮಯ್ಯ, ಚನ್ನನಾಯಕ ಎಂಬುವವರ ಜಮೀನಿಗೂ ನುಗ್ಗಿ ಟೊಮೊಟೋ ಹಾಗೂ ಕೃಷಿ ಉಪಕರಣಗಳನ್ನು ತುಳಿದು ನಾಶಪಡಿಸಿವೆ.
ಆನೆಗಳ ದಾಳಿಯಿಂದ ಒಂದೇ ದಿನ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇನ್ನು ಈ ಭಾಗದಲ್ಲಿ ಆನೆಗಳ ದಾಳಿ ಹೆಚ್ಚಾಗಿದ್ದು, ಇದನ್ನು ತಡೆಗಟ್ಟಲು ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಷ್ಟೆಲ್ಲಾ ಘಟನೆಗಳು ಆದರೂ ಇನ್ನಾದರೂ ಅರಣ್ಯ ಇಲಾಖೆ ಸಿಬ್ಬಂದಿ ರಾತ್ರಿ ಗಸ್ತಿಗೆಂದು ಅರಣ್ಯ ಸಿಬ್ಬಂದಿಯನ್ನು ನೇಮಿಸಬೇಕು. ಆನೆಗಳು ಬರುವುದನ್ನು ನೋಡಿ ನಮಗೆ ಮಾಹಿತಿ ನೀಡಿದರೆ ನಾವು ಆನೆಗಳನ್ನು ಹೇಗಾದರೂ ಮಾಡಿ ಕಾಡಿಗೆ ಓಡಿಸುತ್ತೇವೆ. ಆದಷ್ಟು ಬೇಗ ಅರಣ್ಯ ಇಲಾಖೆ ಈ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದರು.
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…
ಹೈದರಬಾದ್ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…
ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಪ್ರತಿಸ್ಪರ್ಧಿ ಟಿವಿಕೆ…
ಮಡಿಕೇರಿ : ಸರ್ಕಾರಿ ಬಸ್ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್ಆರ್ಟಿಸಿ ಬಸ್…
ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟಿದ್ದಾನೆ. ಅಲ್ಲದೇ,…