ಚಾಮರಾಜನಗರ

ಧ್ರುವನಾರಾಯಣ ದಂಪತಿಗಳಿಗೆ ಹೆಗ್ಗವಾಡಿಯಲ್ಲಿ ಭಾವಪೂರ್ಣ ಶ್ರದ್ದಾಂಜಲಿ

ಮೈಸೂರು :  ಜನಪರ ರಾಜಕಾರಣದ ಮಾದರಿ ನಾಯಕ, ಮಾಜಿ ಸಂಸದ, ಕರ್ನಾಟಕ ಪ್ರದೇಶ ಕಾಂಗ್ರೇಸ್ ನ ಕಾರ್ಯಾದ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಆರ್.ಧ್ರುವನಾರಾಯಣ ಹಾಗೂ ಅವರ ಪತ್ನಿ ವೀಣಾರಿಗೆ ಹುಟ್ಟೂರು ಹೆಗ್ಗವಾಡಿಯಲ್ಲಿಂದು ಬಾವಪೂರ್ಣ ಶ್ರದ್ದಾಂಜಲಿ ಅರ್ಪಿಸಲಾತು.

ಮಂಗಳವಾರ ಬೆಳಗ್ಗೆ ಹೆಗ್ಗವಾಡಿಯ ತೊಟದಲ್ಲಿರುವ ತಂದೆ ಧ್ರುವನಾರಾಯಣ ಹಾಗೂ ತಾಯಿ ವೀಣಾ ದಂಪತಿಗಳ ಸಮಾಧಿಗೆ ಧ್ರುವ ಬೆಂಬಲಿಗರೂ, ಅಭಿಮಾನಿಗಳ ಜೊತೆ ಆಗಮಿಸಿದ ಪುತ್ರರಾದ ಶಾಸಕ ದರ್ಶನ್ ದ್ರುವನಾರಾಯಣ ಹಾಗೂ ಧೀರೇನ್ ಧ್ರುವನಾರಾಯಣ ಕಂಬಿನಿ ತಂಬಿಕೊಂಡು ತಂದೆ ತಾಯಿಗಳಿಗೆ ಭಾವಪೂರ್ಣ ಶ್ರದ್ದಾಂಜಲಿ ಸಮರ್ಪಿಸಿದರು.

ಈ ಸಮಯದಲ್ಲಿ ರಾಜ್ಯ ಕಾಂಗ್ರೆಸ್ ನಾಯಕ ವಿನಯಕುಮಾರ ಸೊರಕೆ, ಗುಂಡ್ಲುಪೇಟೆ ಶಾಸಕ ಗಣೇಶ ಪ್ರಸಾದ, ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಹುಣಸೂರಿನ ಮಂಜುನಾಥ, ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾದ್ಯಕ್ಷೆ ಪುಷ್ಪಾ ಅಮರನಾಥ್, ಕೆ ಪಿ ಸಿ ಸಿ ಕಾರ್ಯದರ್ಶಿಗಳಾದ ಕಾವೇರಪ್ಪ, ಶ್ರೀಕಂಠು, ಎಸ್ ಸಿ ಬಸವರಾಜು, ಹೀರೇಹಳ್ಳಿ ಸೋಮೇಶ, ರವಿ ಕುಮಾರ್, ಕಾಡಾ ಅದ್ಯಕ್ಷ ಮರಿಸ್ವಾಮಿ, ತಗಡೂರು ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಹಾಡ್ಯ ರಂಗಸ್ವಾಮಿ, ಹುಲ್ಲಹಳ್ಳಿಯ ಶ್ರೀಕಂಠ ನಾಯಕ, ಸಿ ಎಂ ಶಂಕರ್, ಗ್ಯಾರಂಟಿ ಸಮಿತಿಯ ಜಿಲ್ಲಾದ್ಯಕ್ಷ ಮಾರುತಿ, ರಾಜ್ಯ ವಿಶ್ವಕರ್ಮ ನಿಗಮದ ಮಾಜಿ ಅದ್ಯಕ್ಷ ನಂದಕುಮಾರ್, ಉಪ್ಪಾರ ನಿಗಮದ ಮಾಜಿ ಅದ್ಯಕ್ಷ ಶಿವಕುಮಾರ್, ಜಿ . ಪಂ ಮಾಜಿ ಸದಸ್ಯರಾದ ಲತಾ ಸಿಧ್ದಶೆಟ್ಟಿ ಯೋಗೀಶ, ಕಬ್ಬಳ್ಳಿ ಮಹೇಶ, ಸದಾಶಿವಮೂರ್ತಿ ನಂಜನಗೂಡು ನಗರಸಭಾ ಅದ್ಯಕ್ಷ ಶ್ರೀಕಂಠ, ಉಪಾದ್ಯಕ್ಷೆ ರೆಹನಾ ಭಾನು, ದೊರೆಸ್ವಾಮಿ ನಾಯಕ, ನಾಗರಾಜು , ರಾಜು ಶ್ರೀನಿವಾಸಮೂರ್ತಿ, ವಿಜಯ ಕುಮಾರ್ ಕಾಗಲವಾಡಿ ಮಾದಪ್ಪ ರವಿಕುಮಾರ್. ನಗರಸಭಾ ಸದಸ್ಯರುಗಳಾದ ಪ್ರದೀಪ್ , ಮಹೇಶ, ಗಂಗಾಧರ್ ಸೇರಿದಂತೆ ಹಲವಾರು ಸದಸ್ಯರುಗಳು ಕಾಂಗ್ರೇಸ್ ಮುಖಂಡರು, ದ್ರುವನಾರಾಯಣರ ಅಭಿಮಾನಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

4 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

5 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

6 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

6 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

7 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

7 hours ago