ಚಾಮರಾಜನಗರ

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಸೇಲಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌತಮ್ ಗೋಯಲ್ ಹೇಳಿದರು.

ತಮಿಳುನಾಡಿನ ಮೇಟೂರು ಮೋಹನ್ ರೆಸಿಡೆನ್ಸಿ ಹೋಟೆಲ್ ನಲ್ಲಿ ಚುನಾವಣಾ ಸಂಬಂಧ ನಡೆದ ಅಂತರರಾಜ್ಯ ಗಡಿ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ತಮಿಳುನಾಡು ರಾಜ್ಯಾದ್ಯಂತ ವಿಧಾನಸಭಾ ಚುನಾವಣೆಗೆ ಈಗಾಗಲೇ ಕ್ಷಣಗಣನೆ ಪ್ರಾರಂಭವಾಗಿದೆ. ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ನೀತಿ ಸಂಹಿತೆ ಪ್ರಾರಂಭವಾಗಲಿದ್ದು ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸ್ ಹಾಗೂ ಅಬಕಾರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಹಕಾರ ಅತಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದರು.

ಕಳೆದ ಚುನಾವಣಾ ಸಂದರ್ಭದಲ್ಲಿ ಅಕ್ರಮ ಹಣ ವರ್ಗಾವಣೆ, ಮದ್ಯ ಸಾಗಣೆ ಸೇರಿದಂತೆ ಚುನಾವಣೆಯಲ್ಲಿ ಮತದಾರರನ್ನು ಆಕರ್ಷಿಸಲು ಗೃಹಪಯೋಗಿ ವಸ್ತುಗಳ ಸಾಗಾಟ ಸೇರಿದಂತೆ ಇನ್ನಿತರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳ ಮಾಹಿತಿ ನೀಡಿದರೆ ಹೆಚ್ಚಿನ ನಿಗಾ ವಹಿಸಲಾಗುವುದು, ತಮಿಳುನಾಡಿನ ಆರೋಪಿಗಳು ಕರ್ನಾಟಕದಲ್ಲಿದ್ದರೆ ಅಂತಹವರ ವಿರುದ್ಧ ತಾವು ನಿಗಾವಹಿಸಬೇಕು, ಕರ್ನಾಟಕ ಹಾಗೂ ತಮಿಳುನಾಡಿನ ಗಡಿಗಳಲ್ಲಿ ಹೆಚ್ಚಿನ ಪೊಲೀಸ್ ಹಾಗೂ ಅಬಕಾರಿ ಪೊಲೀಸರನ್ನು ನೇಮಕ ಮಾಡಬೇಕು ಎಂದು ಮನವಿ ಮಾಡಿದರು.

ತಮಿಳುನಾಡು ರಾಜ್ಯಾದ್ಯಂತ ಗುಟ್ಕಾ ನಿಷೇಧ ಜಾರಿಯಲ್ಲಿದೆ. ಆದರೂ ಕರ್ನಾಟಕದಿಂದ ಕೆಲವರು ಹಣದಾಸೆಗೆ ಸಾಗಾಟ ಮಾಡುತ್ತಿದ್ದಾರೆ ಇಂತಹವರನ್ನು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಮಾಡಿ ಪ್ರಕರಣ ದಾಖಲಿಸಬೇಕು ಎಂದು ಮನವಿ ಮಾಡಿದರು.

ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಮಾತನಾಡಿ, ಕರ್ನಾಟಕ ಹಾಗೂ ತಮಿಳುನಾಡಿನ ಗಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾದ ನಂತರ ಪಾಲಾರ್ ಗರಿಕೆಕಂಡಿ ಅರ್ಧನಾರೀಪುರ, ಪುಣಜನೂರು, ಮದ್ದೂರು ಸೇರಿದಂತೆ ಇನ್ನಿತರ ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು, ಗುಟ್ಕಾ ಸಾಗಾಟ ಸೇರಿದಂತೆ ಯಾವುದೇ ಅಪರಾಧ ಕೃತ್ಯಗಳು ಕಂಡುಬಂದರೆ ಅಂತಹ ವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಪ್ರಕರಣ ದಾಖಲಿಸಲಾಗುವುದು ಒಟ್ಟಾರೆ ಚುನಾವಣೆ ಯಶಸ್ವಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಅಬಕಾರಿ ನಿರೀಕ್ಷಕ ದಯಾನಂದ ಮಾತನಾಡಿ, ಕೊಳ್ಳೇಗಾಲ ವ್ಯಾಪ್ತಿಯಲ್ಲಿ ಒಡೆಯರ ಪಾಳ್ಯ, ನಾಲ್ ರೋಡ್ ಹೂಗ್ಯಂ, ಗೋಪಿನಾಥಂ ಗ್ರಾಮಗಳ ವ್ಯಾಪ್ತಿಯಲ್ಲಿ ಹತ್ತಕ್ಕೂ ಹೆಚ್ಚು ಬಾರ್ ಗಳಿದ್ದು ಚುನಾವಣಾ ಸಂದರ್ಭದಲ್ಲಿ ಈ ಬಾರ್ ಗಳ ಮೇಲೆ ಹೆಚ್ಚಿನ ನಿಗಾವಹಿಸಲಾಗುವುದು. ಹಿರಿಯ ಅಧಿಕಾರಿಗಳು ಆದೇಶ ಹೊರಡಿಸಿದರೆ ನಮ್ಮ ಇಲಾಖೆ ವತಿಯಿಂದಲೂ ಚೆಕ್ಪೋಸ್ಟ್ ಗಳಲ್ಲಿ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಈರೋಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿರುಮತಿ ಎ.ಸುಜಾತ, ಮೇಟೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸುಕುಮಾರ್, ಮೇಟೂರು ಡಿವೈಎಸ್ಪಿ ಷಣ್ಮುಗಂ ಸುಂದರಂ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಜಗದೀಶ್ ಸೇರಿದಂತೆ ತಮಿಳುನಾಡಿನ ವಿವಿಧ ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ ಹಾಗೂ ಅಬಕಾರಿ ನಿರೀಕ್ಷಕರುಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

4 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

12 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

12 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

12 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

12 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

12 hours ago