ಚಾಮರಾಜನಗರ

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಅಕ್ರಮ ಬೇಟೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ 3 ಮಂದಿ ಬೇಟೆಗಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ವನ್ಯಪ್ರಾಣಿಗಳನ್ನು ಅಕ್ರಮವಾಗಿ ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿರುವ ಕುರಿತು ಮಾಹಿತಿ ಲಭಿಸಿದೆ. ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ ಬೇಟೆಗಾರರನ್ನು ಹಿಡಿಯಲು ಮುಂದಾದಾಗ ಅವರು ಗುಂಡಿನ ದಾಳಿ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ಅರಣ್ಯ ಇಲಾಖೆಯವರು ಪ್ರತಿದಾಳಿ ನಡೆಸಿದಾಗ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹನೂರು ತಾಲೂಕಿನ ತೋಮಿಯರ್ ಪಾಳ್ಯ ಗ್ರಾಮದ ಅಂತೋಣಿಸ್ವಾಮಿ, ಪೀಟರ್, ಕುಮಾರ್ ಎಂದು ಗುರುತಿಸಲಾಗಿದೆ.

ಮೃತ ಮೂವರ ಶವಗಳನ್ನು ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಹೆಚ್ಚಿನ ವಿವರಗಳು ಹೊರಬೀಳಲಿವೆ.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆದಿದೆ. ಸಂಪೂರ್ಣ ಮಾಹಿತಿಯನ್ನು ಅರಣ್ಯ ಇಲಾಖೆಯವರು ನೀಡಬೇಕಿದೆ.

 

ಆಂದೋಲನ ಡೆಸ್ಕ್

Recent Posts

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

19 mins ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

25 mins ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

3 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

6 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

7 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

7 hours ago