ಮೈಸೂರು: ಇಪ್ಪತ್ತು ವರ್ಷಗಳ ರಾಜಕೀಯ ವನವಾಸದ ಅಂತ್ಯಗೊಂಡು ನನಗೊಂದು ಅವಕಾಶ ಸಿಕ್ಕಿದೆ. ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಗೆದ್ದು ಬರುವ ಸಂಪೂರ್ಣ ವಿಶ್ವಾಸ ನನಗಿದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ಹೇಳಿದರು.
ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಬಾಲರಾಜು, 2004 ರಲ್ಲಿ ಪಕ್ಷೇತರ ಅಭ್ಯರ್ಥಿ ಸ್ಪರ್ಧೆ ಮಾಡಿ ಶಾಸಕನಾಗಿದ್ದೆ. ನನ್ನ ರಾಜಕೀಯ ಜೀವನದ 31 ವರ್ಷಗಳ ಅನುಭವದಲ್ಲಿ ಕೇವಲ ಮೂರು ವರ್ಷಗಳು ಮಾತ್ರ ಅಧಿಕಾರ ಅನುಭವಿಸಿದ್ದು. ಅದಾದ ನಂತರ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಹಲವು ಪಕ್ಷಕ್ಕೆ ಹೋಗಿ ಬಂದಾಯ್ತು. 20 ವರ್ಷಗಳ ಬಳಿಕ ನನಗೆ ಒಂದು ಅವಕಾಶ ಸಿಕ್ಕಿದೆ ಎಂದರು.
ಕ್ಷೇತ್ರದಲ್ಲಿ ಉತ್ತಮ ವಾತಾವರಣ ಇದೆ. ಹಾಲಿ ಶಾಸಕರಾದ ಶ್ರೀನಿವಾಸ್ ಪ್ರಸಾದ್ ನನಗೆ ಆಶೀರ್ವಾದ ಮಾಡಿದ್ದಾರೆ. ಅವರ ಆಶೀರ್ವಾದ ನನ್ನ ಮೇಲೆ ಇರುತ್ತೆ ಎಂಬ ವಿಶ್ವಾಸವಿದೆ ಎಂದರು.
ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿಲ್ಲದಿದ್ದರೂ ಬಿಜೆಪಿಗೆ ತನ್ನದೇ ಆದ ಹಿಡಿತ ಮತ್ತು ಸಾಂಪ್ರದಾಯಿಕ ಮತಗಳಿವೆ. ಜೊತೆಗೆ ಧ್ರುವನಾರಾಯಣ್ ಬೆಂಬಲಿಗರು, ಶ್ರೀನಿವಾಸ್ ಪ್ರಸಾದ್ ಬೆಂಬಲಿಗರು ಎಲ್ಲರು ಈ ಚುನಾವಣೆಯಲ್ಲಿ ನನಗೆ ಬೆಂಬಲ ನೀಡುವ ಭರವಸೆಯಿದೆ. ಪಕ್ಷ ನನ್ನನ್ನ ಗುರುತಿಸಿ ಟಿಕೆಟ್ ಕೊಟ್ಟಿದೆ ಟಿಕೆಟ್ ಸಿಗಲು ಇಂತಹವರೇ ಸಹಕಾರ ಹೆಚ್ಚು ಅಂತ ನಾನು ಹೇಳಲಾರೆ ಆದರೆ ಈ ಬಾರಿ ಗೆಲ್ಲುವ ವಿಶ್ವಾಸವಿದೆ ಎಂದು ಎಸ್. ಬಾಲರಾಜು ಹೇಳಿದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…