ಚಾಮರಾಜನಗರ

20 ವರ್ಷಗಳ ರಾಜಕೀಯ ವನವಾಸ ಅಂತ್ಯಗೊಂಡಿದೆ: ಎಸ್‌. ಬಾಲರಾಜು

ಮೈಸೂರು: ಇಪ್ಪತ್ತು ವರ್ಷಗಳ ರಾಜಕೀಯ ವನವಾಸದ ಅಂತ್ಯಗೊಂಡು ನನಗೊಂದು ಅವಕಾಶ ಸಿಕ್ಕಿದೆ. ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಗೆದ್ದು ಬರುವ ಸಂಪೂರ್ಣ ವಿಶ್ವಾಸ ನನಗಿದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ಬಾಲರಾಜು ಹೇಳಿದರು.

ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಬಾಲರಾಜು, 2004 ರಲ್ಲಿ ಪಕ್ಷೇತರ ಅಭ್ಯರ್ಥಿ ಸ್ಪರ್ಧೆ ಮಾಡಿ ಶಾಸಕನಾಗಿದ್ದೆ. ನನ್ನ ರಾಜಕೀಯ ಜೀವನದ 31 ವರ್ಷಗಳ ಅನುಭವದಲ್ಲಿ ಕೇವಲ ಮೂರು ವರ್ಷಗಳು ಮಾತ್ರ ಅಧಿಕಾರ ಅನುಭವಿಸಿದ್ದು. ಅದಾದ ನಂತರ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಹಲವು ಪಕ್ಷಕ್ಕೆ ಹೋಗಿ ಬಂದಾಯ್ತು. 20 ವರ್ಷಗಳ ಬಳಿಕ ನನಗೆ ಒಂದು ಅವಕಾಶ ಸಿಕ್ಕಿದೆ ಎಂದರು.

ಕ್ಷೇತ್ರದಲ್ಲಿ ಉತ್ತಮ ವಾತಾವರಣ ಇದೆ. ಹಾಲಿ ಶಾಸಕರಾದ ಶ್ರೀನಿವಾಸ್ ಪ್ರಸಾದ್ ನನಗೆ ಆಶೀರ್ವಾದ ಮಾಡಿದ್ದಾರೆ. ಅವರ ಆಶೀರ್ವಾದ ನನ್ನ ಮೇಲೆ ಇರುತ್ತೆ ಎಂಬ ವಿಶ್ವಾಸವಿದೆ ಎಂದರು.

ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿಲ್ಲದಿದ್ದರೂ ಬಿಜೆಪಿಗೆ ತನ್ನದೇ ಆದ ಹಿಡಿತ ಮತ್ತು ಸಾಂಪ್ರದಾಯಿಕ ಮತಗಳಿವೆ. ಜೊತೆಗೆ ಧ್ರುವನಾರಾಯಣ್ ಬೆಂಬಲಿಗರು, ಶ್ರೀನಿವಾಸ್ ಪ್ರಸಾದ್ ಬೆಂಬಲಿಗರು ಎಲ್ಲರು ಈ ಚುನಾವಣೆಯಲ್ಲಿ ನನಗೆ ಬೆಂಬಲ ನೀಡುವ ಭರವಸೆಯಿದೆ. ಪಕ್ಷ ನನ್ನನ್ನ‌ ಗುರುತಿಸಿ ಟಿಕೆಟ್ ಕೊಟ್ಟಿದೆ ಟಿಕೆಟ್ ಸಿಗಲು ಇಂತಹವರೇ ಸಹಕಾರ ಹೆಚ್ಚು ಅಂತ ನಾನು ಹೇಳಲಾರೆ ಆದರೆ ಈ ಬಾರಿ ಗೆಲ್ಲುವ ವಿಶ್ವಾಸವಿದೆ ಎಂದು ಎಸ್‌. ಬಾಲರಾಜು ಹೇಳಿದರು.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

11 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

11 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

11 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

11 hours ago