ಪ್ರಶಾಂತ್ ಎನ್.ಮಲ್ಲಿಕ್
ಚಾಮರಾಜನಗರ: ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನದ ರಸ್ತೆ ಬಳಿ ರಾತ್ರಿ ಸಂಚಾರ ನಿಷೇಧ ತೆರವಿಗೆ ಹೆಚ್ಚುತ್ತಿರುವ ಒತ್ತಡ ಹಿನ್ನಲೆ ಪರಿಸರವಾದಿಗಳಿಂದ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದೇಶದ ಪ್ರತಿಷ್ಠಿತ ಹುಲಿ ಸಂರಕ್ಷಿತ ಪ್ರದೇಶವಾದ ಬಂಡೀಪುರ. ರಾತ್ರಿ ಸಂಚಾರ ನಿರ್ಬಂಧ ತೆರವಿಗೆ ತೆರಮರೆಯ ಕಸರತ್ತು ಕರ್ನಾಟಕ ಮತ್ತು ಕೇರಳ ಸರ್ಕಾರಗಳಿಂದ ನಡೆಯುತ್ತಿದೆ. ಇದರ ಬೆನ್ನಲ್ಲೇ ನಿಷೇಧ ತೆರವಿಗೆ ಪರಿಸರವಾದಿಗಳ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಈ ಕುರಿತು ಪರಿಸರವಾದಿಗಳು ಪ್ರತಿಭಟನೆ ನಡೆಸಿದ್ದು, ರಾಜಕಾರಣಿಗಳ ಹೇಳಿಕೆಗಳು ಸಾಕಷ್ಟು ಸಂದೇಹವನ್ನು ಉಂಟುಮಾಡುತ್ತಿವೆ. ರಾತ್ರಿ ಸಂಚಾರಕ್ಕೆ ಅವಕಾಶ ನೀಡಿದರೆ, ಹಲವಾರು ಪ್ರಾಣಿಗಳು ಸಾವನ್ನಪ್ಪಲಿವೆ. ಹಾಗಾಗಿ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಇದಕ್ಕೆ ಅವಕಾಶ ನೀಡದೇ, ನ್ಯಾಯಾಲಯದ ತೀರ್ಪನ್ನು ಗೌರವಿಸಿ, ಪಾಲನೆ ಮಾಡಬೇಕು ಎಂದು ಒತ್ತಾಯಿಸಿದರು.
ಇನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. ರಾತ್ರಿ ಸಂಚಾರದಿಂದ ವನ್ಯಜೀವಿಗಳಿಗೆ ಅಪಾಯ ಸಂಭವಿಸಲಿದೆ. ಹೀಗಾಗಿ ರಾತ್ರಿ 9 ರಿಂದ ಬೆಳಗ್ಗೆ 6 ರವರಗೆ ವಾಹನಗಳ ಸಂಚಾರ ನಿರ್ಬಂಧ ಹೀಗೆ ಮುಂದುವರಿಯಬೇಕು ಎಂದು ಆಗ್ರಹಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…