ಪ್ರಶಾಂತ್ ಎನ್.ಮಲ್ಲಿಕ್
ಚಾಮರಾಜನಗರ: ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನದ ರಸ್ತೆ ಬಳಿ ರಾತ್ರಿ ಸಂಚಾರ ನಿಷೇಧ ತೆರವಿಗೆ ಹೆಚ್ಚುತ್ತಿರುವ ಒತ್ತಡ ಹಿನ್ನಲೆ ಪರಿಸರವಾದಿಗಳಿಂದ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದೇಶದ ಪ್ರತಿಷ್ಠಿತ ಹುಲಿ ಸಂರಕ್ಷಿತ ಪ್ರದೇಶವಾದ ಬಂಡೀಪುರ. ರಾತ್ರಿ ಸಂಚಾರ ನಿರ್ಬಂಧ ತೆರವಿಗೆ ತೆರಮರೆಯ ಕಸರತ್ತು ಕರ್ನಾಟಕ ಮತ್ತು ಕೇರಳ ಸರ್ಕಾರಗಳಿಂದ ನಡೆಯುತ್ತಿದೆ. ಇದರ ಬೆನ್ನಲ್ಲೇ ನಿಷೇಧ ತೆರವಿಗೆ ಪರಿಸರವಾದಿಗಳ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಈ ಕುರಿತು ಪರಿಸರವಾದಿಗಳು ಪ್ರತಿಭಟನೆ ನಡೆಸಿದ್ದು, ರಾಜಕಾರಣಿಗಳ ಹೇಳಿಕೆಗಳು ಸಾಕಷ್ಟು ಸಂದೇಹವನ್ನು ಉಂಟುಮಾಡುತ್ತಿವೆ. ರಾತ್ರಿ ಸಂಚಾರಕ್ಕೆ ಅವಕಾಶ ನೀಡಿದರೆ, ಹಲವಾರು ಪ್ರಾಣಿಗಳು ಸಾವನ್ನಪ್ಪಲಿವೆ. ಹಾಗಾಗಿ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಇದಕ್ಕೆ ಅವಕಾಶ ನೀಡದೇ, ನ್ಯಾಯಾಲಯದ ತೀರ್ಪನ್ನು ಗೌರವಿಸಿ, ಪಾಲನೆ ಮಾಡಬೇಕು ಎಂದು ಒತ್ತಾಯಿಸಿದರು.
ಇನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. ರಾತ್ರಿ ಸಂಚಾರದಿಂದ ವನ್ಯಜೀವಿಗಳಿಗೆ ಅಪಾಯ ಸಂಭವಿಸಲಿದೆ. ಹೀಗಾಗಿ ರಾತ್ರಿ 9 ರಿಂದ ಬೆಳಗ್ಗೆ 6 ರವರಗೆ ವಾಹನಗಳ ಸಂಚಾರ ನಿರ್ಬಂಧ ಹೀಗೆ ಮುಂದುವರಿಯಬೇಕು ಎಂದು ಆಗ್ರಹಿಸಿದರು.
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…