ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಮಾರ್ಚ್.3ರ ಮಂಗಳವಾರ ಮಧ್ಯಾಹ್ನದ ನಂತರ ಚಂದ್ರಗ್ರಹಣವಿದ್ದರೂ ಶ್ರೀ ಮಹದೇಶ್ವರ ಸ್ವಾಮಿಯ ದರ್ಶನಕ್ಕೆ ಯಾವುದೇ ತೊಂದರೆ ಇಲ್ಲ. ಭಕ್ತಾದಿಗಳು ಎಂದಿನಂತೆ ದರ್ಶನ ಮಾಡಬಹುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ತಿಳಿಸಿದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಗಳವಾರ ಮಧ್ಯಾಹ್ನ 3:50 ನಿಮಿಷದಿಂದ ಸಂಜೆ 6 ಗಂಟೆ 40 ನಿಮಿಷದವರೆಗೆ ಚಂದ್ರಗ್ರಹಣವಿದ್ದರೂ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ದೇವಸ್ಥಾನದಲ್ಲಿ ದರ್ಶನಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ. ಈ ವೇಳೆಯಲ್ಲಿಯೂ ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದು ತಮ್ಮ ಹರಕೆ ಕಾಣಿಕೆಗಳನ್ನು ಸಮರ್ಪಿಸಬಹುದು ಎಂದು ತಿಳಿಸಿದರು.
ಚಂದ್ರ ಗ್ರಹಣ ಮುಗಿದ ನಂತರ ಧಾರ್ಮಿಕ ಸಂಪ್ರದಾಯದಂತೆ ದೇವಸ್ಥಾನದ ಆವರಣವನ್ನು ಶುದ್ಧೀಕರಿಸಿ ವಿಶೇಷ ಪೂಜೆಯ ನಂತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.
ಈ ವೇಳೆ ದೇವಸ್ಥಾನದ ಆಗಮಿಕರಾದ ಕರವೀರಸ್ವಾಮಿ, ಪಾರು ಪತ್ತೆದಾರರಾದ ಮಹಾಲಿಂಗನಕಟ್ಟೆ ಮಹಾದೇವಸ್ವಾಮಿ ರಾಜಶೇಖರ್ ಹಾಜರಿದ್ದರು.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…