ಚಾಮರಾಜನಗರ/ಕೊಳ್ಳೇಗಾಲ: ಮಾಜಿ ಶಾಸಕ ಎನ್.ಮಹೇಶ್ ಅವರು ಸಭೆಯೊಂದರಲ್ಲಿ ನನ್ನನ್ನು ಕೊಳ್ಳೇಗಾಲದ ಹೊಲೆಯ ಮೂದೇವಿಗಳು ಸೋಲಿಸಿಬಿಟ್ರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಹೇಳಿಕೆಯಿಂದಾಗಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಎನ್. ಮಹೇಶ್ ವಿರುದ್ಧ ದಲಿತ ಸಂಘ ಸಂಸ್ಥೆಗಳು ಪ್ರತಿಭಟನೆಗಿಳಿದವು. ಇನ್ನು ಈ ಆಕ್ಷೇಪಾರ್ಹ ಹೇಳಿಕೆ ವಿರೋಧಿಸಿ ಪ್ಲೆಕ್ಸ್ ಅಳವಡಿಸಿ ಬಹಿಷ್ಕಾರ ಬೆದರಿಕೆ ಹಾಕಿದ್ದಾರೆ.
ನಗರದ ಭೀಮನಗರದ ಎರಡೂ ಹೆಬ್ಬಗಿಲುಗಳಲ್ಲೂ ಸಂವಿಧಾನ ವಿರೋಧಿ, ಸಮುದಾಯ ವಿರೋಧಿ ಎನ್, ಮಹೇಶ್ಗೆ ಭೀಮನಗರಕ್ಕೆ ಪ್ರವೇಶವಿಲ್ಲ ಎಂಬ ಪ್ಲೆಕ್ಸ್ನ್ನು ಹಾಕಿ ತಮ್ಮ ಆಕ್ರೋಶ ಹೊರ ಹಾಕಿದ್ದರು. ಈ ಪ್ಲೆಕ್ಸ್ ಅಳವಡಿಸಿದ ಅರ್ಧಗಂಟೆ ಒಳಗಾಗಿ ತೆರವು ಮಾಡಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ರೀತಿ ಪ್ಲೆಕ್ಸ್ಗಳ ಅಳವಡಿಕೆಗೆ ಅನುಮತಿಯಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ಕ್ರಮ ವಹಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಗ್ರಾಮದ ಕೆಲವು ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ ಎನ್ನಲಾಗಿದೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…