ಚಾಮರಾಜನಗರ/ಕೊಳ್ಳೇಗಾಲ: ಮಾಜಿ ಶಾಸಕ ಎನ್.ಮಹೇಶ್ ಅವರು ಸಭೆಯೊಂದರಲ್ಲಿ ನನ್ನನ್ನು ಕೊಳ್ಳೇಗಾಲದ ಹೊಲೆಯ ಮೂದೇವಿಗಳು ಸೋಲಿಸಿಬಿಟ್ರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಹೇಳಿಕೆಯಿಂದಾಗಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಎನ್. ಮಹೇಶ್ ವಿರುದ್ಧ ದಲಿತ ಸಂಘ ಸಂಸ್ಥೆಗಳು ಪ್ರತಿಭಟನೆಗಿಳಿದವು. ಇನ್ನು ಈ ಆಕ್ಷೇಪಾರ್ಹ ಹೇಳಿಕೆ ವಿರೋಧಿಸಿ ಪ್ಲೆಕ್ಸ್ ಅಳವಡಿಸಿ ಬಹಿಷ್ಕಾರ ಬೆದರಿಕೆ ಹಾಕಿದ್ದಾರೆ.
ನಗರದ ಭೀಮನಗರದ ಎರಡೂ ಹೆಬ್ಬಗಿಲುಗಳಲ್ಲೂ ಸಂವಿಧಾನ ವಿರೋಧಿ, ಸಮುದಾಯ ವಿರೋಧಿ ಎನ್, ಮಹೇಶ್ಗೆ ಭೀಮನಗರಕ್ಕೆ ಪ್ರವೇಶವಿಲ್ಲ ಎಂಬ ಪ್ಲೆಕ್ಸ್ನ್ನು ಹಾಕಿ ತಮ್ಮ ಆಕ್ರೋಶ ಹೊರ ಹಾಕಿದ್ದರು. ಈ ಪ್ಲೆಕ್ಸ್ ಅಳವಡಿಸಿದ ಅರ್ಧಗಂಟೆ ಒಳಗಾಗಿ ತೆರವು ಮಾಡಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ರೀತಿ ಪ್ಲೆಕ್ಸ್ಗಳ ಅಳವಡಿಕೆಗೆ ಅನುಮತಿಯಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ಕ್ರಮ ವಹಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಗ್ರಾಮದ ಕೆಲವು ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ ಎನ್ನಲಾಗಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…