ಚಾಮರಾಜನಗರ/ಕೊಳ್ಳೇಗಾಲ: ಮಾಜಿ ಶಾಸಕ ಎನ್.ಮಹೇಶ್ ಅವರು ಸಭೆಯೊಂದರಲ್ಲಿ ನನ್ನನ್ನು ಕೊಳ್ಳೇಗಾಲದ ಹೊಲೆಯ ಮೂದೇವಿಗಳು ಸೋಲಿಸಿಬಿಟ್ರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಹೇಳಿಕೆಯಿಂದಾಗಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಎನ್. ಮಹೇಶ್ ವಿರುದ್ಧ ದಲಿತ ಸಂಘ ಸಂಸ್ಥೆಗಳು ಪ್ರತಿಭಟನೆಗಿಳಿದವು. ಇನ್ನು ಈ ಆಕ್ಷೇಪಾರ್ಹ ಹೇಳಿಕೆ ವಿರೋಧಿಸಿ ಪ್ಲೆಕ್ಸ್ ಅಳವಡಿಸಿ ಬಹಿಷ್ಕಾರ ಬೆದರಿಕೆ ಹಾಕಿದ್ದಾರೆ.
ನಗರದ ಭೀಮನಗರದ ಎರಡೂ ಹೆಬ್ಬಗಿಲುಗಳಲ್ಲೂ ಸಂವಿಧಾನ ವಿರೋಧಿ, ಸಮುದಾಯ ವಿರೋಧಿ ಎನ್, ಮಹೇಶ್ಗೆ ಭೀಮನಗರಕ್ಕೆ ಪ್ರವೇಶವಿಲ್ಲ ಎಂಬ ಪ್ಲೆಕ್ಸ್ನ್ನು ಹಾಕಿ ತಮ್ಮ ಆಕ್ರೋಶ ಹೊರ ಹಾಕಿದ್ದರು. ಈ ಪ್ಲೆಕ್ಸ್ ಅಳವಡಿಸಿದ ಅರ್ಧಗಂಟೆ ಒಳಗಾಗಿ ತೆರವು ಮಾಡಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ರೀತಿ ಪ್ಲೆಕ್ಸ್ಗಳ ಅಳವಡಿಕೆಗೆ ಅನುಮತಿಯಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ಕ್ರಮ ವಹಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಗ್ರಾಮದ ಕೆಲವು ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ ಎನ್ನಲಾಗಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…