ಕೊಳ್ಳೇಗಾಲ : ಬಿಜೆಪಿಯಿಂದ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ 10 ಮಂದಿಯನ್ನು ಮತ್ತು ಚಾ.ನಗರ ನಗರಸಭೆಯ ಓರ್ವ ಸದಸ್ಯರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇರೆಗೆ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಬಿಜೆಪಿ ಜಿಲ್ಲಾ ಕಾರ್ಯಕಾರಿ ಸಮಿತಿ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ಉಚ್ಚಾಟಿಸಿ ಆದೇಶಿಸಿದ್ದಾರೆ.
ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿ ಕಾಂಗ್ರೆಸ್ ಪಕ್ಷದ ಜೊತೆ ಕೈಜೋಡಿಸಿದ್ದರಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:-ಕಲಬುರಗಿ ಸೇರಿ ಉತ್ತರದ ಜಿಲ್ಲೆಗಳಲ್ಲಿ ನೆರೆ ಹಾವಳಿ; ಉಸ್ತುವಾರಿ ಸಚಿವರ ವಿರುದ್ಧ ಜೆಡಿಎಸ್ ಕಿಡಿ
ಉಚ್ಚಾಟನೆಗೊಂಡ ಸದಸ್ಯರು
ನಗರಸಭೆ ೧೦ನೇ ವಾರ್ಡ್ ನ ಜಿ.ಪಿ.ಶಿವಕುಮಾರ್, ೯ನೇ ವಾರ್ಡ್ನ ನಾಗೇಂದ್ರ, ೫ ನೇ ವಾರ್ಡ್ನ ಧರಣೇಶ್, ೨೧ನೇ ವಾರ್ಡ್ನ ಪ್ರಕಾಶ್, ೨೫ನೇ ವಾರ್ಡ್ನ ರಾಮಕೃಷ್ಣ, ೭ನೇ ವಾರ್ಡ್ನ ನಾಸೀರ್ ಷರೀ-, ೬ನೇ ವಾರ್ಡ್ನ ಮಾನಸ ಪ್ರಭುಸ್ವಾಮಿ, ೧೩ನೇ ವಾರ್ಡ್ನ ಪವಿತ್ರ ರಮೇಶ್, ೨೬ನೇ ವಾರ್ಡ್ನ ನಾಗಸುಂದ್ರಮ್ಮ, ೮ನೇ ವಾರ್ಡ್ನ ಕವಿತಾ.
ಚಾ.ನಗರ ನಗರಸಭೆಯ ಸದಸ್ಯ ಮಹದೇವಯ್ಯ ಅವರನ್ನೂ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…
ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್ಡಿಎ ನಾಯಕರು ಸಚಿವರಾಗಿ…