ಚಾಮರಾಜನಗರ

ಪಿಜಿ ಪಾಳ್ಯ ಸಫಾರಿ ಕೇಂದ್ರಕ್ಕೆ ಹೆಚ್ಚುವರಿ ಸಫಾರಿ ವಾಹನ

ಹನೂರು: ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಿ.ಜಿ ಪಾಳ್ಯ ಸಫಾರಿ ಕೇಂದ್ರಕ್ಕೆ ವನ್ಯಜೀವಿ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆ ಹೆಚ್ಚುವರಿಯಾಗಿ ಹೊಸದಾಗಿ ಸಫಾರಿ ವಾಹನ ನೀಡಲಾಗಿದೆ.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿ ಜಿ ಪಾಳ್ಯ ಸಫಾರಿ ಕೇಂದ್ರವು ಡಿಸೆಂಬರ್‌ನಲ್ಲಿ ಪ್ರಾರಂಭವಾಗಿದ್ದು ಇದುವರೆಗೂ ಎರಡು ಸಫಾರಿ ವಾಹನಗಳಲ್ಲಿ ವನ್ಯಜೀವಿ ಪ್ರಿಯರನ್ನು ಕರೆದೊಯ್ಯಲಾಗುತ್ತಿತ್ತು. ಆದರೆ ಪ್ರವಾಸಿಗರ ಸಂಖ್ಯೆಗೆ ತಕ್ಕಂತೆ ವಾಹನದ ಸೌಲಭ್ಯ ಇಲ್ಲದೆ ಇರುವುದರಿಂದ ಟಿಕೆಟ್ ಸಿಗದೇ ನಿರಾಸೆಯಿಂದ ವಾಪಸ್ ತೆರಳುತ್ತಿದ್ದರು.

ಹೀಗಾಗಿ ವನ್ಯಜೀವಿ ಪ್ರಿಯರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚುವರಿಯಾಗಿ ಒಂದು ವಾಹನದ ಸೌಲಭ್ಯ ಕಲ್ಪಿಸುವಂತೆ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಇದೀಗ ಪ್ರವಾಸಿಗರ ಅನುಕೂಲಕ್ಕೆ ತಕ್ಕಂತೆ ಹೊಸದಾಗಿ ಒಂದು ವಾಹನ ನೀಡಿದ್ದು ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಮೂರು ವಾಹನಗಳಲ್ಲಿ ಪ್ರವಾಸಿಗರನ್ನು ಸಫಾರಿಗೆ ಕರೆದುಕೊಂಡು ಹೋಗಲಿದ್ದಾರೆ.

ಕಳೆದ 9 ತಿಂಗಳ ಅವಧಿಯಲ್ಲಿ 2700 ಪ್ರವಾಸಿಗರು, 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ 11 ಲಕ್ಷ ಆದಾಯ ಬಂದಿದೆ. ಸಫಾರಿಗೆ ಬರುವ ಪ್ರವಾಸಿಗರ ವಾಹನಕ್ಕೆ ಪ್ರವೇಶ ಶುಲ್ಕ ನೂರು ರೂಪಾಯಿ ನಿಗದಿಪಡಿಸಲಾಗಿದೆ.

ಸಫಾರಿ ಪ್ರಾರಂಭವಾದ ದಿನದಿಂದ ಸಫಾರಿಗೆ ತೆರಳುವವರಿಗೆ ಆನೆ, ಕಾಡೆಮ್ಮೆ, ಚಿರತೆ ,ಕಡವೆ, ಕರಡಿ, ಆಮೆ, ಸೀಳು ನಾಯಿ, ಮುಂಗುಸಿ, ಉಡ ಮಾತ್ರ ಕಾಣಸಿಗುತ್ತಿತ್ತು. ಆದರೆ ಇತ್ತೀಚೆಗೆ ಸುಮಾರು 20ಕ್ಕೂ ಹೆಚ್ಚು ಬಾರಿ ಪ್ರವಾಸಿಗರಿಗೆ ಹುಲಿರಾಯನ ದರ್ಶನ ಸಿಕ್ಕಿದೆ.

ರಜಾ ದಿನಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರವಾಸಿಗರು, ವಾರದ ದಿನಗಳಲ್ಲಿ 10ಕ್ಕೂ ಹೆಚ್ಚು ಜನರು ಆಗಮಿಸುತ್ತಾರೆ. ಕೆಲವೊಮ್ಮೆ ಹೆಚ್ಚು ಪ್ರವಾಸಿಗರು ಆಗಮಿಸಿ ಟಿಕೆಟ್ ಸಿಗದೇ ನಿರಾಸೆಯಿಂದ ವಾಪಸ್ ತೆರಳುತ್ತಿದ್ದರು. ಇದೀಗ ಇನ್ನೊಂದು ವಾಹನ ಬಂದಿರುವುದರಿಂದ ಪ್ರವಾಸಿಗರಿಗೆ ಹೆಚ್ಚಿನ ಅನುಕೂಲ ಸಿಗಲಿದೆ. – ವಿಠ್ಠಲ್, ಸಫಾರಿ ವಾಹನಗಳ ಮೇಲುಸ್ತುವಾರಿ.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

34 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

1 hour ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago