ಚಾಮರಾಜನಗರ

ಲಂಡನ್‌ನಲ್ಲಿ ಕಾನೂನು ಪದವಿ ಪಡೆದ ರೈತನ ಪುತ್ರಿಯ ವಿವಾಹಕ್ಕೆ ಹೊಲ‍‍‍ವೇ ಚಪ್ಪರ!

* ಮಾವು, ಹಲಸಿನ ಮರದಡಿ ವಿವಾಹಶಾಸ್ತ್ರ
* ಹೊಲದಲ್ಲಿ ಸಿಗುವ ಬಗೆ ಬಗೆಯ ಸೊಪ್ಪುಗಳಿಂದ ಅಲಂಕಾರ ಜೂನ್.02ರಂದು ವಿವಾಹ

ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟ ವನ್ಯಧಾಮದ ನಿಸರ್ಗದ ಮಡಿಲಿನಲ್ಲಿ ಹತ್ತಾರು ಎಕರೆ ಕೃಷಿ ಭೂಮಿಯಲ್ಲಿ ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಜೇನು ಸಾಕಾಣೆ, ರೇಷ್ಮೆ, ಪುಷ್ಪ ಹಾಗೂ ಅರಣ್ಯ ಕೃಷಿಯನ್ನು ಮಾಡುವ ಮೂಲಕ ತಮ್ಮ ಜಮೀನನ್ನು ಕೃಷಿ ಪ್ರವಾಸೋದ್ಯಮ ಕ್ಷೇತ್ರವನ್ನಾಗಿಸಿರುವ ಪ್ರಗತಿ ಪರ ರೈತರೊಬ್ಬರು ಲಂಡನ್‌ನಲ್ಲಿ ಕಾನೂನು ಪದವಿ ಪಡೆದಿರುವ ಪುತ್ರಿ ಮದುವೆಯನ್ನು ಹೊಲದಲ್ಲಿ ನಡೆಸಲಿದ್ದಾರೆ.

ರೈತ ಬರೀ ಬೆ‍ಳೆ ಬೆಳೆಯುತ್ತಾ ಕುಳಿತರೆ ಸಾಲದು, ತನ್ನ ಕೃಷಿ ಚಟುವಟಿಕೆಯನ್ನು ಪ್ರತಿಯೊಬ್ಬರಿಗೂ ಪರಿಚಯಿಸಬೇಕು. ಅದರ ಮೂಲಕ ರೈತನ ಕೃಷಿ ಭೂಮಿಯೂ ಕೃಷಿ ಪ್ರವಾಸೋದ್ಯಮ ತಾಣವಾಗಬೇಕು ಎಂಬ ಪರಿಕಲ್ಪನೆ ಹುಟ್ಟು ಹಾಕಿ, ಕಿಸಾನ್‌ ಅಗ್ರೋ ಟೂರಿಸಂ ಡೆವಲಪ್ಮೆಂಟ್‌ ಕಂಪನಿ ಮೂಲಕ ರೈತರನ್ನು ಕೃಷಿ ಪ್ರವಾಸೋದ್ಯಮಿಗಳಾಗಿಸಲು ಹೊರಟಿರುವ ಗಡಿ ಜಿಲ್ಲೆ ಚಾಮರಾಜನಗರದ ಚಿಂಚಳ್ಳಿಯ ರೈತ ಪಿ.ದಯಾನಂದ್‌ ಅವರು ತಮ್ಮ ಪುತ್ರಿ ವಿವಾಹವನ್ನು ತಮ್ಮ ಹೊಲದಲ್ಲೇ ಏರ್ಪಡಿಸಿದ್ದಾರೆ.

ತಮ್ಮ ಹೊಲವನ್ನು ನಿಸರ್ಗದ ಮಡಿಲಿನಂತೆ ಸೃಷ್ಟಿ ಮಾಡಿದ್ದು, ಅಲ್ಲಿ ಏನುಂಟು ಏನಿಲ್ಲ ಎಂಬುವಂತೆ ಅಳಿವಿನಂಚಿನಲ್ಲಿರುವ ಸಸ್ಯಗಳನ್ನು ಎಲ್ಲೆಡೆಯಿಂದ ಸಂಗ್ರಹಿಸಿ ತಂದು, ಸಂರಕ್ಷಣೆ ಮಾಡುವ ಮೂಲಕ ಹೊಲದಲ್ಲೇ ಕಾಡನ್ನೇ ಬೆಳೆಸಿದ್ದಾರೆ. ಅಲ್ಲಿ ದುಂಬಿಗಳ ಝೇಂಕಾರ, ಚಿಟ್ಟೆ ಪಕ್ಷಿಗಳ ಕಲರವ ಕೇಳುವಂತಹ ವಾತವರಣ ನಿರ್ಮಾಣಮಾಡಿದ್ದು, ಅಲ್ಲೇ ತಮ್ಮ ದ್ವಿತೀಯ ಪುತ್ರಿ ರಶ್ಮಿ ದಯಾನಂದ್‌ ಅವರನ್ನು ಬೆಂಗಳೂರಿನ ಕುಬೇರ್‌ ಅವರಿಗೆ ಧಾರೆ ಎರೆದು ಕೊಡಲಿದ್ದಾರೆ.

ಈ ಹಿಂದೆ ಮದುವೆಗಳು ಹಳ್ಳಿಯ ಮನೆಗಳಲ್ಲಿ ನೆಂಟರಿಷ್ಟರ ಸಮ್ಮುಖದಲ್ಲಿ ನಡೆಸುತ್ತಿದ್ದವು. ಇದೀಗ ನಮ್ಮ ಮಗಳ ಮದುವೆಯನ್ನು ನಾನು ಹತ್ತಾರು ವರ್ಷಗಳಿಂದ ಶ್ರಮಪಟ್ಟು ನೆಟ್ಟಿರುವ ಮರಗಿಡಗಳು, ಪಕ್ಷಿಗಳ ಕಲರವ, ದುಂಬಿಯ ಜೈಕಾರದೊಂದಿಗೆ ಇಲ್ಲೇ ಸಿಗುವ ಸ್ಧಳೀಯ ಸಸ್ಯಗಳ ಅಲಂಕಾರರೊಂದಿಗೆ ನಡೆಯಲಿ. ಮದುವೆಗೆ ಬರುವ ಬಂಧು ಬಾಂಧವರಿಗೆ ಕೃಷಿ ಪ್ರವಾಸೋದ್ಯಮವೂ ಆಗಲಿ, ತೋಟಗಾರಿಕೆ, ಕೃಷಿ, ಹೈನುಗಾರಿಕೆ, ಮೀನುಗಾರಿಕೆ, ಜೇನು ಸಾಕಾಣೆ, ರೇಷ್ಮೆ, ಹಾಗೂ ಅರಣ್ಯ ಕೃಷಿಯನ್ನು ನೋಡಿ ಸಂಭ್ರಮಿಸುವ ಮೂಲಕ ಮದುವೆಯಲ್ಲಿ ಭಾಗಿಯಾಗಲಿ ಎಂಬ ಉದ್ದೇಶದಿಂದ ಹೊಲದಲ್ಲೇ ಮಾವು, ಹಲಸಿನ ಮರದಡಿ ವಿವಾಹ ನಡೆಸುತ್ತಿದ್ದೇವೆ. ಇದೇ ನಮ್ಮ ಮಗಳು ಮತ್ತು ಅಳಿಯನ ಆಶಯವಾಗಿತ್ತು ಎನ್ನುತ್ತಾರೆ ದಯಾನಂದ್‌.

ಮದುವೆಗೆ ಬರುವವರು ಸಾವಿರಾರು ಸಸ್ಯ ವರ್ಗಗಳ ಜೊತೆಗೆ ಹತ್ತಾರು ಬೆಳೆ ನೋಡಬಹುದಾಗಿದ್ದು, ನೂರಾರು ಬಗೆ ಬಗೆಯ ಹಣ್ಣುಗಳನ್ನು ಸವಿಯಬಹುದಾಗಿದೆ. ಬರಗೂರ್, ಹಳ್ಳಿಕಾರ್, ತಳಿ ಹಸುಗಳು, ಕುರಿ, ಕೋಳಿ, ಮೇಕೆ ಹಾಗೂ ಕತ್ತೆಗಳನ್ನು ಸಾಕುತ್ತಿರುವುದನ್ನು ನೋಡಬಹುದು. ಎಣ್ಣೆ ಘಟಕ, ಸುಗಂಧ ತಯಾರಿಕಾ ಘಟಕವೂ ಇಲ್ಲಿದ್ದು, ತೋಟಕ್ಕೆ ಭೇಟಿ ನೀಡುವವರಿಗೆ ಕೃಷಿ ತಿಳುವಳಿಕೆ ಮೂಡಿಸಬೇಕು ಎಂಬ ಉದ್ದೇಶದಿಂದ ವಿವಿಧ ಬಗೆಯ ಪರಿಕರಗಳ ಜೊತೆಗೆ ಎತ್ತಿನ ಗಾಡಿ, ಕುದುರೆಗಾಡಿ, ವಿವಿಧ ಮಾದರಿಯ ಸ್ಕೂಟರ್‌ ಮತ್ತು ಕಾರುಗಳನ್ನು ಪ್ರದರ್ಶನಕ್ಕಿಟ್ಟಿದ್ದಾರೆ.

ಹಳ್ಳಿಗಾಡಿನವರೇ ಸಾಲ ಸೋಲವಾದ್ರು ಸರಿ ಎಂದು ದೊಡ್ಡ ದೊಡ್ಡ ನಗರಿ, ವಿದೇಶದಲ್ಲಿ ಮದುವೆ ಮಾಡಿಸುವ ಈ ಕಾಲದಲ್ಲಿ ಲಂಡನ್‌ನಲ್ಲಿ ವ್ಯಾಸಂಗ ಮುಗಿಸಿರುವ ಪುತ್ರಿ ವಿವಾಹವನ್ನು ಹನೂರು ತಾಲ್ಲೂಕಿನ ಚಿಂಚಹಳ್ಳಿ ಗ್ರಾಮದ ರೈತ ಪಿ. ದಯಾನಂದ್‌ ಅವರು ಶ್ರಮಪಟ್ಟು ಬೆಳೆಸಿರುವ ಸಾವಿರಾರು ಸಸ್ಯಕಾಶಿಯ ನಡುವೆ ಸಿಗುವ ಬಗೆ ಬಗೆಯ ಸೊಪ್ಪುಗಳಿಂದ ಅಲಂಕಾರ ಮಾವು, ಹಲಸಿನ ಮರದಡಿ ಚಪ್ಪರ ನಿರ್ಮಿಸಿ ಪುತ್ರಿ ವಿವಾಹಶಾಸ್ತ್ರಕ್ಕೆ ವೇದಿಕೆ ಕಲ್ಪಿಸಿಕೊಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

5 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

5 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

6 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

6 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

8 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

9 hours ago