ಚಾಮರಾಜನಗರ

ಲಂಡನ್‌ನಲ್ಲಿ ಕಾನೂನು ಪದವಿ ಪಡೆದ ರೈತನ ಪುತ್ರಿಯ ವಿವಾಹಕ್ಕೆ ಹೊಲ‍‍‍ವೇ ಚಪ್ಪರ!

* ಮಾವು, ಹಲಸಿನ ಮರದಡಿ ವಿವಾಹಶಾಸ್ತ್ರ
* ಹೊಲದಲ್ಲಿ ಸಿಗುವ ಬಗೆ ಬಗೆಯ ಸೊಪ್ಪುಗಳಿಂದ ಅಲಂಕಾರ ಜೂನ್.02ರಂದು ವಿವಾಹ

ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟ ವನ್ಯಧಾಮದ ನಿಸರ್ಗದ ಮಡಿಲಿನಲ್ಲಿ ಹತ್ತಾರು ಎಕರೆ ಕೃಷಿ ಭೂಮಿಯಲ್ಲಿ ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಜೇನು ಸಾಕಾಣೆ, ರೇಷ್ಮೆ, ಪುಷ್ಪ ಹಾಗೂ ಅರಣ್ಯ ಕೃಷಿಯನ್ನು ಮಾಡುವ ಮೂಲಕ ತಮ್ಮ ಜಮೀನನ್ನು ಕೃಷಿ ಪ್ರವಾಸೋದ್ಯಮ ಕ್ಷೇತ್ರವನ್ನಾಗಿಸಿರುವ ಪ್ರಗತಿ ಪರ ರೈತರೊಬ್ಬರು ಲಂಡನ್‌ನಲ್ಲಿ ಕಾನೂನು ಪದವಿ ಪಡೆದಿರುವ ಪುತ್ರಿ ಮದುವೆಯನ್ನು ಹೊಲದಲ್ಲಿ ನಡೆಸಲಿದ್ದಾರೆ.

ರೈತ ಬರೀ ಬೆ‍ಳೆ ಬೆಳೆಯುತ್ತಾ ಕುಳಿತರೆ ಸಾಲದು, ತನ್ನ ಕೃಷಿ ಚಟುವಟಿಕೆಯನ್ನು ಪ್ರತಿಯೊಬ್ಬರಿಗೂ ಪರಿಚಯಿಸಬೇಕು. ಅದರ ಮೂಲಕ ರೈತನ ಕೃಷಿ ಭೂಮಿಯೂ ಕೃಷಿ ಪ್ರವಾಸೋದ್ಯಮ ತಾಣವಾಗಬೇಕು ಎಂಬ ಪರಿಕಲ್ಪನೆ ಹುಟ್ಟು ಹಾಕಿ, ಕಿಸಾನ್‌ ಅಗ್ರೋ ಟೂರಿಸಂ ಡೆವಲಪ್ಮೆಂಟ್‌ ಕಂಪನಿ ಮೂಲಕ ರೈತರನ್ನು ಕೃಷಿ ಪ್ರವಾಸೋದ್ಯಮಿಗಳಾಗಿಸಲು ಹೊರಟಿರುವ ಗಡಿ ಜಿಲ್ಲೆ ಚಾಮರಾಜನಗರದ ಚಿಂಚಳ್ಳಿಯ ರೈತ ಪಿ.ದಯಾನಂದ್‌ ಅವರು ತಮ್ಮ ಪುತ್ರಿ ವಿವಾಹವನ್ನು ತಮ್ಮ ಹೊಲದಲ್ಲೇ ಏರ್ಪಡಿಸಿದ್ದಾರೆ.

ತಮ್ಮ ಹೊಲವನ್ನು ನಿಸರ್ಗದ ಮಡಿಲಿನಂತೆ ಸೃಷ್ಟಿ ಮಾಡಿದ್ದು, ಅಲ್ಲಿ ಏನುಂಟು ಏನಿಲ್ಲ ಎಂಬುವಂತೆ ಅಳಿವಿನಂಚಿನಲ್ಲಿರುವ ಸಸ್ಯಗಳನ್ನು ಎಲ್ಲೆಡೆಯಿಂದ ಸಂಗ್ರಹಿಸಿ ತಂದು, ಸಂರಕ್ಷಣೆ ಮಾಡುವ ಮೂಲಕ ಹೊಲದಲ್ಲೇ ಕಾಡನ್ನೇ ಬೆಳೆಸಿದ್ದಾರೆ. ಅಲ್ಲಿ ದುಂಬಿಗಳ ಝೇಂಕಾರ, ಚಿಟ್ಟೆ ಪಕ್ಷಿಗಳ ಕಲರವ ಕೇಳುವಂತಹ ವಾತವರಣ ನಿರ್ಮಾಣಮಾಡಿದ್ದು, ಅಲ್ಲೇ ತಮ್ಮ ದ್ವಿತೀಯ ಪುತ್ರಿ ರಶ್ಮಿ ದಯಾನಂದ್‌ ಅವರನ್ನು ಬೆಂಗಳೂರಿನ ಕುಬೇರ್‌ ಅವರಿಗೆ ಧಾರೆ ಎರೆದು ಕೊಡಲಿದ್ದಾರೆ.

ಈ ಹಿಂದೆ ಮದುವೆಗಳು ಹಳ್ಳಿಯ ಮನೆಗಳಲ್ಲಿ ನೆಂಟರಿಷ್ಟರ ಸಮ್ಮುಖದಲ್ಲಿ ನಡೆಸುತ್ತಿದ್ದವು. ಇದೀಗ ನಮ್ಮ ಮಗಳ ಮದುವೆಯನ್ನು ನಾನು ಹತ್ತಾರು ವರ್ಷಗಳಿಂದ ಶ್ರಮಪಟ್ಟು ನೆಟ್ಟಿರುವ ಮರಗಿಡಗಳು, ಪಕ್ಷಿಗಳ ಕಲರವ, ದುಂಬಿಯ ಜೈಕಾರದೊಂದಿಗೆ ಇಲ್ಲೇ ಸಿಗುವ ಸ್ಧಳೀಯ ಸಸ್ಯಗಳ ಅಲಂಕಾರರೊಂದಿಗೆ ನಡೆಯಲಿ. ಮದುವೆಗೆ ಬರುವ ಬಂಧು ಬಾಂಧವರಿಗೆ ಕೃಷಿ ಪ್ರವಾಸೋದ್ಯಮವೂ ಆಗಲಿ, ತೋಟಗಾರಿಕೆ, ಕೃಷಿ, ಹೈನುಗಾರಿಕೆ, ಮೀನುಗಾರಿಕೆ, ಜೇನು ಸಾಕಾಣೆ, ರೇಷ್ಮೆ, ಹಾಗೂ ಅರಣ್ಯ ಕೃಷಿಯನ್ನು ನೋಡಿ ಸಂಭ್ರಮಿಸುವ ಮೂಲಕ ಮದುವೆಯಲ್ಲಿ ಭಾಗಿಯಾಗಲಿ ಎಂಬ ಉದ್ದೇಶದಿಂದ ಹೊಲದಲ್ಲೇ ಮಾವು, ಹಲಸಿನ ಮರದಡಿ ವಿವಾಹ ನಡೆಸುತ್ತಿದ್ದೇವೆ. ಇದೇ ನಮ್ಮ ಮಗಳು ಮತ್ತು ಅಳಿಯನ ಆಶಯವಾಗಿತ್ತು ಎನ್ನುತ್ತಾರೆ ದಯಾನಂದ್‌.

ಮದುವೆಗೆ ಬರುವವರು ಸಾವಿರಾರು ಸಸ್ಯ ವರ್ಗಗಳ ಜೊತೆಗೆ ಹತ್ತಾರು ಬೆಳೆ ನೋಡಬಹುದಾಗಿದ್ದು, ನೂರಾರು ಬಗೆ ಬಗೆಯ ಹಣ್ಣುಗಳನ್ನು ಸವಿಯಬಹುದಾಗಿದೆ. ಬರಗೂರ್, ಹಳ್ಳಿಕಾರ್, ತಳಿ ಹಸುಗಳು, ಕುರಿ, ಕೋಳಿ, ಮೇಕೆ ಹಾಗೂ ಕತ್ತೆಗಳನ್ನು ಸಾಕುತ್ತಿರುವುದನ್ನು ನೋಡಬಹುದು. ಎಣ್ಣೆ ಘಟಕ, ಸುಗಂಧ ತಯಾರಿಕಾ ಘಟಕವೂ ಇಲ್ಲಿದ್ದು, ತೋಟಕ್ಕೆ ಭೇಟಿ ನೀಡುವವರಿಗೆ ಕೃಷಿ ತಿಳುವಳಿಕೆ ಮೂಡಿಸಬೇಕು ಎಂಬ ಉದ್ದೇಶದಿಂದ ವಿವಿಧ ಬಗೆಯ ಪರಿಕರಗಳ ಜೊತೆಗೆ ಎತ್ತಿನ ಗಾಡಿ, ಕುದುರೆಗಾಡಿ, ವಿವಿಧ ಮಾದರಿಯ ಸ್ಕೂಟರ್‌ ಮತ್ತು ಕಾರುಗಳನ್ನು ಪ್ರದರ್ಶನಕ್ಕಿಟ್ಟಿದ್ದಾರೆ.

ಹಳ್ಳಿಗಾಡಿನವರೇ ಸಾಲ ಸೋಲವಾದ್ರು ಸರಿ ಎಂದು ದೊಡ್ಡ ದೊಡ್ಡ ನಗರಿ, ವಿದೇಶದಲ್ಲಿ ಮದುವೆ ಮಾಡಿಸುವ ಈ ಕಾಲದಲ್ಲಿ ಲಂಡನ್‌ನಲ್ಲಿ ವ್ಯಾಸಂಗ ಮುಗಿಸಿರುವ ಪುತ್ರಿ ವಿವಾಹವನ್ನು ಹನೂರು ತಾಲ್ಲೂಕಿನ ಚಿಂಚಹಳ್ಳಿ ಗ್ರಾಮದ ರೈತ ಪಿ. ದಯಾನಂದ್‌ ಅವರು ಶ್ರಮಪಟ್ಟು ಬೆಳೆಸಿರುವ ಸಾವಿರಾರು ಸಸ್ಯಕಾಶಿಯ ನಡುವೆ ಸಿಗುವ ಬಗೆ ಬಗೆಯ ಸೊಪ್ಪುಗಳಿಂದ ಅಲಂಕಾರ ಮಾವು, ಹಲಸಿನ ಮರದಡಿ ಚಪ್ಪರ ನಿರ್ಮಿಸಿ ಪುತ್ರಿ ವಿವಾಹಶಾಸ್ತ್ರಕ್ಕೆ ವೇದಿಕೆ ಕಲ್ಪಿಸಿಕೊಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

10 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

10 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

11 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

11 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

11 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

12 hours ago