ಹನೂರು :ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಬಸವರಾಜು ಎಂಬುವವರ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯನ್ನು ಕಾಡುಪ್ರಾಣಿಗಳು ನಾಶ ಮಾಡಿರುವ ಘಟನೆ ನಡೆದಿದ್ದು ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಒತ್ತಾಯಿಸಿದ್ದಾರೆ
ಕಾಂಚಳ್ಳಿ ಗ್ರಾಮದ ಬಸವರಾಜ್ ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಸುಮಾರು 2 ಎಕರೆ 29 ಸೆಂಟು (ಸರ್ವೇ ನಂ 439) ಮೆಕ್ಕೆಜೋಳವನ್ನು ಕಾಡುಪ್ರಾಣಿಗಳು ನಾಶ ಮಾಡಿವೆ. ಸುಮಾರು 3 ಲಕ್ಷ ರೂಪಾಯಿ ಸಾಲ ಮಾಡಿ ಬೆಳೆದಿದ್ದ ಬೆಳೆ ಕಾಡು ಪ್ರಾಣಿಗಳ ಪಾಲಾಗಿದ್ದು, ಹಗಲು ಇರುಳು ಎನ್ನದೇ ಕಾವಲು ಕಾಯ್ದು, ಗೊಬ್ಬರ ಹಾಕಿ ಬೆಳೆಸಿದರೂ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದಾರೆ.
ರೈತರು ಬೆಳೆದ ಬೆಳೆಗಳನ್ನು ಕಾಡು ಪ್ರಾಣಿಗಳು ನಾಶ ಮಾಡಿದರೆ, ಅರಣ್ಯ ಇಲಾಖೆಯವರು ಸ್ಥಳ ಮಹಜರು ಮಾಡಲು ಹಿಂದೆ ಮುಂದೆ ನೋಡಿ ಕೆಲ ದಿನಗಳು ಕಳೆದ ನಂತರ ಬರುತ್ತಾರೆ. ಆದರೆ ಸೂಕ್ತ ಪರಿಹಾರ ದೊರಕಿಸುವಲ್ಲಿ ವಿಫಲರಾಗಿದ್ದಾರೆ. ಬೆಳೆ ಪರಿಹಾರ ಎಂದು ಕೇವಲ 5ದಿಂದ 10 ಸಾವಿರ ರೂ ಕೊಡುತ್ತಾರೆ. ಅವರು ಕೊಡುವ ಪರಿಹಾರದ ಹಣಕ್ಕೆ ವರ್ಷಗಟ್ಟಲೆ ಕಾಯಬೇಕು. ಅವರು ಕೊಡುವ ಹಣ ಬಿತ್ತನೆ ಮಾಡುವುದಕ್ಕೂ ಆಗುವುದಿಲ್ಲ, ಜಮೀನನ್ನೇ ನಂಬಿಕೊಂಡು ತಾವು ಜೀವನ ನಡೆಸುತ್ತಿದ್ದು ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ಕೊಡುವಂತೆ ರೈತ ಬಸವರಾಜ ಮನವಿ ಮಾಡಿದ್ದಾರೆ.
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…
ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…
ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್ ಬಂದ್ಗೆ ಕರೆ ನೀಡಲಾಗಿದೆ.…