ಹನೂರು :ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಬಸವರಾಜು ಎಂಬುವವರ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯನ್ನು ಕಾಡುಪ್ರಾಣಿಗಳು ನಾಶ ಮಾಡಿರುವ ಘಟನೆ ನಡೆದಿದ್ದು ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಒತ್ತಾಯಿಸಿದ್ದಾರೆ
ಕಾಂಚಳ್ಳಿ ಗ್ರಾಮದ ಬಸವರಾಜ್ ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಸುಮಾರು 2 ಎಕರೆ 29 ಸೆಂಟು (ಸರ್ವೇ ನಂ 439) ಮೆಕ್ಕೆಜೋಳವನ್ನು ಕಾಡುಪ್ರಾಣಿಗಳು ನಾಶ ಮಾಡಿವೆ. ಸುಮಾರು 3 ಲಕ್ಷ ರೂಪಾಯಿ ಸಾಲ ಮಾಡಿ ಬೆಳೆದಿದ್ದ ಬೆಳೆ ಕಾಡು ಪ್ರಾಣಿಗಳ ಪಾಲಾಗಿದ್ದು, ಹಗಲು ಇರುಳು ಎನ್ನದೇ ಕಾವಲು ಕಾಯ್ದು, ಗೊಬ್ಬರ ಹಾಕಿ ಬೆಳೆಸಿದರೂ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದಾರೆ.
ರೈತರು ಬೆಳೆದ ಬೆಳೆಗಳನ್ನು ಕಾಡು ಪ್ರಾಣಿಗಳು ನಾಶ ಮಾಡಿದರೆ, ಅರಣ್ಯ ಇಲಾಖೆಯವರು ಸ್ಥಳ ಮಹಜರು ಮಾಡಲು ಹಿಂದೆ ಮುಂದೆ ನೋಡಿ ಕೆಲ ದಿನಗಳು ಕಳೆದ ನಂತರ ಬರುತ್ತಾರೆ. ಆದರೆ ಸೂಕ್ತ ಪರಿಹಾರ ದೊರಕಿಸುವಲ್ಲಿ ವಿಫಲರಾಗಿದ್ದಾರೆ. ಬೆಳೆ ಪರಿಹಾರ ಎಂದು ಕೇವಲ 5ದಿಂದ 10 ಸಾವಿರ ರೂ ಕೊಡುತ್ತಾರೆ. ಅವರು ಕೊಡುವ ಪರಿಹಾರದ ಹಣಕ್ಕೆ ವರ್ಷಗಟ್ಟಲೆ ಕಾಯಬೇಕು. ಅವರು ಕೊಡುವ ಹಣ ಬಿತ್ತನೆ ಮಾಡುವುದಕ್ಕೂ ಆಗುವುದಿಲ್ಲ, ಜಮೀನನ್ನೇ ನಂಬಿಕೊಂಡು ತಾವು ಜೀವನ ನಡೆಸುತ್ತಿದ್ದು ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ಕೊಡುವಂತೆ ರೈತ ಬಸವರಾಜ ಮನವಿ ಮಾಡಿದ್ದಾರೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…