ಹನೂರು :ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಬಸವರಾಜು ಎಂಬುವವರ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯನ್ನು ಕಾಡುಪ್ರಾಣಿಗಳು ನಾಶ ಮಾಡಿರುವ ಘಟನೆ ನಡೆದಿದ್ದು ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಒತ್ತಾಯಿಸಿದ್ದಾರೆ
ಕಾಂಚಳ್ಳಿ ಗ್ರಾಮದ ಬಸವರಾಜ್ ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಸುಮಾರು 2 ಎಕರೆ 29 ಸೆಂಟು (ಸರ್ವೇ ನಂ 439) ಮೆಕ್ಕೆಜೋಳವನ್ನು ಕಾಡುಪ್ರಾಣಿಗಳು ನಾಶ ಮಾಡಿವೆ. ಸುಮಾರು 3 ಲಕ್ಷ ರೂಪಾಯಿ ಸಾಲ ಮಾಡಿ ಬೆಳೆದಿದ್ದ ಬೆಳೆ ಕಾಡು ಪ್ರಾಣಿಗಳ ಪಾಲಾಗಿದ್ದು, ಹಗಲು ಇರುಳು ಎನ್ನದೇ ಕಾವಲು ಕಾಯ್ದು, ಗೊಬ್ಬರ ಹಾಕಿ ಬೆಳೆಸಿದರೂ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದಾರೆ.
ರೈತರು ಬೆಳೆದ ಬೆಳೆಗಳನ್ನು ಕಾಡು ಪ್ರಾಣಿಗಳು ನಾಶ ಮಾಡಿದರೆ, ಅರಣ್ಯ ಇಲಾಖೆಯವರು ಸ್ಥಳ ಮಹಜರು ಮಾಡಲು ಹಿಂದೆ ಮುಂದೆ ನೋಡಿ ಕೆಲ ದಿನಗಳು ಕಳೆದ ನಂತರ ಬರುತ್ತಾರೆ. ಆದರೆ ಸೂಕ್ತ ಪರಿಹಾರ ದೊರಕಿಸುವಲ್ಲಿ ವಿಫಲರಾಗಿದ್ದಾರೆ. ಬೆಳೆ ಪರಿಹಾರ ಎಂದು ಕೇವಲ 5ದಿಂದ 10 ಸಾವಿರ ರೂ ಕೊಡುತ್ತಾರೆ. ಅವರು ಕೊಡುವ ಪರಿಹಾರದ ಹಣಕ್ಕೆ ವರ್ಷಗಟ್ಟಲೆ ಕಾಯಬೇಕು. ಅವರು ಕೊಡುವ ಹಣ ಬಿತ್ತನೆ ಮಾಡುವುದಕ್ಕೂ ಆಗುವುದಿಲ್ಲ, ಜಮೀನನ್ನೇ ನಂಬಿಕೊಂಡು ತಾವು ಜೀವನ ನಡೆಸುತ್ತಿದ್ದು ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ಕೊಡುವಂತೆ ರೈತ ಬಸವರಾಜ ಮನವಿ ಮಾಡಿದ್ದಾರೆ.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…