ಚಾಮರಾಜನಗರ

ಕಾಡು ಪ್ರಾಣಿಗಳಿಂದ ಬೆಳೆ ನಾಶ: ಪರಿಹಾರಕ್ಕೆ ರೈತನ ಮನವಿ

ಹನೂರು :ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಬಸವರಾಜು ಎಂಬುವವರ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯನ್ನು ಕಾಡುಪ್ರಾಣಿಗಳು ನಾಶ ಮಾಡಿರುವ ಘಟನೆ ನಡೆದಿದ್ದು ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಒತ್ತಾಯಿಸಿದ್ದಾರೆ

ಕಾಂಚಳ್ಳಿ ಗ್ರಾಮದ ಬಸವರಾಜ್ ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಸುಮಾರು 2 ಎಕರೆ 29 ಸೆಂಟು (ಸರ್ವೇ ನಂ 439) ಮೆಕ್ಕೆಜೋಳವನ್ನು ಕಾಡುಪ್ರಾಣಿಗಳು ನಾಶ ಮಾಡಿವೆ. ಸುಮಾರು 3 ಲಕ್ಷ ರೂಪಾಯಿ ಸಾಲ ಮಾಡಿ ಬೆಳೆದಿದ್ದ ಬೆಳೆ ಕಾಡು ಪ್ರಾಣಿಗಳ ಪಾಲಾಗಿದ್ದು, ಹಗಲು ಇರುಳು ಎನ್ನದೇ ಕಾವಲು ಕಾಯ್ದು, ಗೊಬ್ಬರ ಹಾಕಿ ಬೆಳೆಸಿದರೂ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದಾರೆ.

ರೈತರು ಬೆಳೆದ ಬೆಳೆಗಳನ್ನು ಕಾಡು ಪ್ರಾಣಿಗಳು ನಾಶ ಮಾಡಿದರೆ, ಅರಣ್ಯ ಇಲಾಖೆಯವರು ಸ್ಥಳ ಮಹಜರು ಮಾಡಲು ಹಿಂದೆ ಮುಂದೆ ನೋಡಿ ಕೆಲ ದಿನಗಳು ಕಳೆದ ನಂತರ ಬರುತ್ತಾರೆ. ಆದರೆ ಸೂಕ್ತ ಪರಿಹಾರ ದೊರಕಿಸುವಲ್ಲಿ ವಿಫಲರಾಗಿದ್ದಾರೆ. ಬೆಳೆ ಪರಿಹಾರ ಎಂದು ಕೇವಲ 5ದಿಂದ 10 ಸಾವಿರ ರೂ ಕೊಡುತ್ತಾರೆ. ಅವರು ಕೊಡುವ ಪರಿಹಾರದ ಹಣಕ್ಕೆ ವರ್ಷಗಟ್ಟಲೆ ಕಾಯಬೇಕು. ಅವರು ಕೊಡುವ ಹಣ ಬಿತ್ತನೆ ಮಾಡುವುದಕ್ಕೂ ಆಗುವುದಿಲ್ಲ, ಜಮೀನನ್ನೇ ನಂಬಿಕೊಂಡು ತಾವು ಜೀವನ ನಡೆಸುತ್ತಿದ್ದು ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ಕೊಡುವಂತೆ ರೈತ ಬಸವರಾಜ ಮನವಿ ಮಾಡಿದ್ದಾರೆ.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

3 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

3 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

4 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

4 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

4 hours ago