ಚಾಮರಾಜನಗರ

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ, ಸಾರ್ವಜನಿಕರಿಗೆ ವ್ಯವಸಾಯಕ್ಕೆ ಹಾಗೂ ಕುಡಿಯಲುಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವುದಾಗಿ ಶಾಸಕ ಎಂ.ಆರ್ ಮಂಜುನಾಥ್ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಳೆದ 153 ದಿನಗಳಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿಯನ್ನು ರೈತರು ಅಂತ್ಯಗೊಳಿಸಿದ್ದಾರೆ.

ಹನೂರು ತಾಲ್ಲೂಕಿನ ಒಡಕೆ ಹಳ್ಳ ಗ್ರಾಮದಲ್ಲಿ ದಂಟಳ್ಳಿ ಏತ ನೀರಾವರಿ ಹೋರಾಟ ಸಮಿತಿ ವತಿಯಿಂದ ದಂಟಳ್ಳಿ ಮಾರ್ಗವಾಗಿ ಮಾರ್ಟಳ್ಳಿ ಕೆರೆಕಟ್ಟೆಗಳಿಗೆ ನೀರು ತುಂಬಿಸುವಂತೆ 152 ದಿನಗಳಿಂದ ನಿರಂತರ ಹೋರಾಟ ನಡೆಯುತ್ತಿತ್ತು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಶಾಸಕರು ಅಧಿಕಾರಿಗಳು ಭೇಟಿ ನೀಡಿ ಭರವಸೆ ನೀಡಿದ್ದರು ರೈತರು ಮಾತ್ರ ಡಿಪಿಆರ್ ಆಗುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪ್ರತಿಭಟನೆ ಮುಂದುವರೆಸಿದ್ದರು. ಬಜೆಟ್ ನಲ್ಲಿ 490 ಕೋಟಿ ಯೋಜನೆ ಅನುಮೋದನೆಯಾದ ನಂತರ ಶಾಸಕ ಮಂಜುನಾಥ್ ಭೇಟಿ ನೀಡಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಇಂದು ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದಾರೆ.

ನಂತರ ಶಾಸಕ ಎಂಆರ್ ಮಂಜುನಾಥ್ ಮಾತನಾಡಿ, ಹನೂರು ವಿಧಾನಸಭಾ ಕ್ಷೇತ್ರಕ್ಕೆ ಸಮಗ್ರ ನೀರಾವರಿ ಯೋಜನೆ ಕಲ್ಪಿಸುವುದಾಗಿ ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದೇನೆ. ಆ ಮಾತಿಗೆ ಈಗಲೂ ಬದ್ಧನಾಗಿದ್ದೇನೆ ಎಂದರು.

ಹನೂರು ವಿಧಾನಸಭಾ ಕ್ಷೇತ್ರದ ಪ್ರಮುಖ ಮೂರು ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆಗೆ ಅನುದಾನ ಬಿಡುಗಡೆಯಾಗಿದ್ದರೂ ರಾಮನಗುಡ್ಡ ಹಾಗೂ ಹುಬ್ಬೆ ಹುಣಸೆಜಲಾಶಯಕ್ಕೆ ನೀರು ತುಂಬಿಸಲು ಸಾಧ್ಯವಾಗಿರಲಿಲ್ಲ. ಕಳೆದ ಎರಡು ತಿಂಗಳ ಹಿಂದೆ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ ಹಳ್ಳದಲ್ಲಿ ನೀರು ಹರಿಸುತ್ತಿರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ಕೊಳವೆಬಾವಿಗಳಲ್ಲಿ ಉತ್ತಮವಾಗಿ ನೀರು ಬರುತ್ತಿರುವುದರಿಂದ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ಮುಂದಿನ ಒಂದು ತಿಂಗಳೊಳಗೆ ಹುಬ್ಬೆ ಹುಣಸೆ ಜಲಾಶಯಕ್ಕೂ ನೀರು ತುಂಬಿಸಲು ಭೂಮಿ ಪೂಜೆ ಸಲ್ಲಿಸಲಾಗುವುದು. ಹುಬ್ಬೆ ಹುಣಸೆ ಜಲಾಶಯಕ್ಕೆ ಪೈಪ್‌ಲೈನ್ ಕಾಮಗಾರಿ ಮಾಡಲು 20 ಕೋಟಿಗಳ ಅವಶ್ಯಕತೆ ಇದೆ. ಆದರೆ ಕಣ್ಣೂರು ಗ್ರಾಮದಿಂದ ಹಳ್ಳದ ಮೂಲಕ ನೀರು ಹರಿಸಿ ಪೈಪ್‌ಲೈನ್ ಪೂರ್ಣಗೊಳಿಸಲು 10 ಕೋಟಿಗಳ ಅವಶ್ಯಕತೆ ಇದೆ. ಇನ್ನು ಒಂದು ತಿಂಗಳು ತುಂಬಿಸಲು ಕ್ರಮ ವಹಿಸಲಾಗುವುದು. ಇದರಿಂದ ಸುತ್ತಮುತ್ತಲಿನ ರೈತರ ಜಮೀನುಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

3 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

3 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

3 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

3 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

4 hours ago

ಜಮ್ಮು-ಕಾಶ್ಮೀರದಲ್ಲಿ ಭೀಕರ ಹಿಮಪಾತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಧರ್ಬಾಲ್ ಜಿಲ್ಲೆಯ ಝೋಜಿಲಾ ಪಾಸ್‌ ಬಳಿಯ ಝೀರೋ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು…

4 hours ago