ಚಾಮರಾಜನಗರ

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ, ಸಾರ್ವಜನಿಕರಿಗೆ ವ್ಯವಸಾಯಕ್ಕೆ ಹಾಗೂ ಕುಡಿಯಲುಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವುದಾಗಿ ಶಾಸಕ ಎಂ.ಆರ್ ಮಂಜುನಾಥ್ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಳೆದ 153 ದಿನಗಳಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿಯನ್ನು ರೈತರು ಅಂತ್ಯಗೊಳಿಸಿದ್ದಾರೆ.

ಹನೂರು ತಾಲ್ಲೂಕಿನ ಒಡಕೆ ಹಳ್ಳ ಗ್ರಾಮದಲ್ಲಿ ದಂಟಳ್ಳಿ ಏತ ನೀರಾವರಿ ಹೋರಾಟ ಸಮಿತಿ ವತಿಯಿಂದ ದಂಟಳ್ಳಿ ಮಾರ್ಗವಾಗಿ ಮಾರ್ಟಳ್ಳಿ ಕೆರೆಕಟ್ಟೆಗಳಿಗೆ ನೀರು ತುಂಬಿಸುವಂತೆ 152 ದಿನಗಳಿಂದ ನಿರಂತರ ಹೋರಾಟ ನಡೆಯುತ್ತಿತ್ತು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಶಾಸಕರು ಅಧಿಕಾರಿಗಳು ಭೇಟಿ ನೀಡಿ ಭರವಸೆ ನೀಡಿದ್ದರು ರೈತರು ಮಾತ್ರ ಡಿಪಿಆರ್ ಆಗುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪ್ರತಿಭಟನೆ ಮುಂದುವರೆಸಿದ್ದರು. ಬಜೆಟ್ ನಲ್ಲಿ 490 ಕೋಟಿ ಯೋಜನೆ ಅನುಮೋದನೆಯಾದ ನಂತರ ಶಾಸಕ ಮಂಜುನಾಥ್ ಭೇಟಿ ನೀಡಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಇಂದು ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದಾರೆ.

ನಂತರ ಶಾಸಕ ಎಂಆರ್ ಮಂಜುನಾಥ್ ಮಾತನಾಡಿ, ಹನೂರು ವಿಧಾನಸಭಾ ಕ್ಷೇತ್ರಕ್ಕೆ ಸಮಗ್ರ ನೀರಾವರಿ ಯೋಜನೆ ಕಲ್ಪಿಸುವುದಾಗಿ ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದೇನೆ. ಆ ಮಾತಿಗೆ ಈಗಲೂ ಬದ್ಧನಾಗಿದ್ದೇನೆ ಎಂದರು.

ಹನೂರು ವಿಧಾನಸಭಾ ಕ್ಷೇತ್ರದ ಪ್ರಮುಖ ಮೂರು ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆಗೆ ಅನುದಾನ ಬಿಡುಗಡೆಯಾಗಿದ್ದರೂ ರಾಮನಗುಡ್ಡ ಹಾಗೂ ಹುಬ್ಬೆ ಹುಣಸೆಜಲಾಶಯಕ್ಕೆ ನೀರು ತುಂಬಿಸಲು ಸಾಧ್ಯವಾಗಿರಲಿಲ್ಲ. ಕಳೆದ ಎರಡು ತಿಂಗಳ ಹಿಂದೆ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ ಹಳ್ಳದಲ್ಲಿ ನೀರು ಹರಿಸುತ್ತಿರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ಕೊಳವೆಬಾವಿಗಳಲ್ಲಿ ಉತ್ತಮವಾಗಿ ನೀರು ಬರುತ್ತಿರುವುದರಿಂದ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ಮುಂದಿನ ಒಂದು ತಿಂಗಳೊಳಗೆ ಹುಬ್ಬೆ ಹುಣಸೆ ಜಲಾಶಯಕ್ಕೂ ನೀರು ತುಂಬಿಸಲು ಭೂಮಿ ಪೂಜೆ ಸಲ್ಲಿಸಲಾಗುವುದು. ಹುಬ್ಬೆ ಹುಣಸೆ ಜಲಾಶಯಕ್ಕೆ ಪೈಪ್‌ಲೈನ್ ಕಾಮಗಾರಿ ಮಾಡಲು 20 ಕೋಟಿಗಳ ಅವಶ್ಯಕತೆ ಇದೆ. ಆದರೆ ಕಣ್ಣೂರು ಗ್ರಾಮದಿಂದ ಹಳ್ಳದ ಮೂಲಕ ನೀರು ಹರಿಸಿ ಪೈಪ್‌ಲೈನ್ ಪೂರ್ಣಗೊಳಿಸಲು 10 ಕೋಟಿಗಳ ಅವಶ್ಯಕತೆ ಇದೆ. ಇನ್ನು ಒಂದು ತಿಂಗಳು ತುಂಬಿಸಲು ಕ್ರಮ ವಹಿಸಲಾಗುವುದು. ಇದರಿಂದ ಸುತ್ತಮುತ್ತಲಿನ ರೈತರ ಜಮೀನುಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

57 mins ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

58 mins ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

1 hour ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

4 hours ago