ಚಾಮರಾಜನಗರ

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ, ಸಾರ್ವಜನಿಕರಿಗೆ ವ್ಯವಸಾಯಕ್ಕೆ ಹಾಗೂ ಕುಡಿಯಲುಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವುದಾಗಿ ಶಾಸಕ ಎಂ.ಆರ್ ಮಂಜುನಾಥ್ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಳೆದ 153 ದಿನಗಳಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿಯನ್ನು ರೈತರು ಅಂತ್ಯಗೊಳಿಸಿದ್ದಾರೆ.

ಹನೂರು ತಾಲ್ಲೂಕಿನ ಒಡಕೆ ಹಳ್ಳ ಗ್ರಾಮದಲ್ಲಿ ದಂಟಳ್ಳಿ ಏತ ನೀರಾವರಿ ಹೋರಾಟ ಸಮಿತಿ ವತಿಯಿಂದ ದಂಟಳ್ಳಿ ಮಾರ್ಗವಾಗಿ ಮಾರ್ಟಳ್ಳಿ ಕೆರೆಕಟ್ಟೆಗಳಿಗೆ ನೀರು ತುಂಬಿಸುವಂತೆ 152 ದಿನಗಳಿಂದ ನಿರಂತರ ಹೋರಾಟ ನಡೆಯುತ್ತಿತ್ತು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಶಾಸಕರು ಅಧಿಕಾರಿಗಳು ಭೇಟಿ ನೀಡಿ ಭರವಸೆ ನೀಡಿದ್ದರು ರೈತರು ಮಾತ್ರ ಡಿಪಿಆರ್ ಆಗುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪ್ರತಿಭಟನೆ ಮುಂದುವರೆಸಿದ್ದರು. ಬಜೆಟ್ ನಲ್ಲಿ 490 ಕೋಟಿ ಯೋಜನೆ ಅನುಮೋದನೆಯಾದ ನಂತರ ಶಾಸಕ ಮಂಜುನಾಥ್ ಭೇಟಿ ನೀಡಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಇಂದು ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದಾರೆ.

ನಂತರ ಶಾಸಕ ಎಂಆರ್ ಮಂಜುನಾಥ್ ಮಾತನಾಡಿ, ಹನೂರು ವಿಧಾನಸಭಾ ಕ್ಷೇತ್ರಕ್ಕೆ ಸಮಗ್ರ ನೀರಾವರಿ ಯೋಜನೆ ಕಲ್ಪಿಸುವುದಾಗಿ ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದೇನೆ. ಆ ಮಾತಿಗೆ ಈಗಲೂ ಬದ್ಧನಾಗಿದ್ದೇನೆ ಎಂದರು.

ಹನೂರು ವಿಧಾನಸಭಾ ಕ್ಷೇತ್ರದ ಪ್ರಮುಖ ಮೂರು ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆಗೆ ಅನುದಾನ ಬಿಡುಗಡೆಯಾಗಿದ್ದರೂ ರಾಮನಗುಡ್ಡ ಹಾಗೂ ಹುಬ್ಬೆ ಹುಣಸೆಜಲಾಶಯಕ್ಕೆ ನೀರು ತುಂಬಿಸಲು ಸಾಧ್ಯವಾಗಿರಲಿಲ್ಲ. ಕಳೆದ ಎರಡು ತಿಂಗಳ ಹಿಂದೆ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ ಹಳ್ಳದಲ್ಲಿ ನೀರು ಹರಿಸುತ್ತಿರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ಕೊಳವೆಬಾವಿಗಳಲ್ಲಿ ಉತ್ತಮವಾಗಿ ನೀರು ಬರುತ್ತಿರುವುದರಿಂದ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ಮುಂದಿನ ಒಂದು ತಿಂಗಳೊಳಗೆ ಹುಬ್ಬೆ ಹುಣಸೆ ಜಲಾಶಯಕ್ಕೂ ನೀರು ತುಂಬಿಸಲು ಭೂಮಿ ಪೂಜೆ ಸಲ್ಲಿಸಲಾಗುವುದು. ಹುಬ್ಬೆ ಹುಣಸೆ ಜಲಾಶಯಕ್ಕೆ ಪೈಪ್‌ಲೈನ್ ಕಾಮಗಾರಿ ಮಾಡಲು 20 ಕೋಟಿಗಳ ಅವಶ್ಯಕತೆ ಇದೆ. ಆದರೆ ಕಣ್ಣೂರು ಗ್ರಾಮದಿಂದ ಹಳ್ಳದ ಮೂಲಕ ನೀರು ಹರಿಸಿ ಪೈಪ್‌ಲೈನ್ ಪೂರ್ಣಗೊಳಿಸಲು 10 ಕೋಟಿಗಳ ಅವಶ್ಯಕತೆ ಇದೆ. ಇನ್ನು ಒಂದು ತಿಂಗಳು ತುಂಬಿಸಲು ಕ್ರಮ ವಹಿಸಲಾಗುವುದು. ಇದರಿಂದ ಸುತ್ತಮುತ್ತಲಿನ ರೈತರ ಜಮೀನುಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

7 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

8 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

8 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

10 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

14 hours ago