ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ಭಾಗದಿಂದ ಕೇರಳಕ್ಕೆ ಎಂ.ಸ್ಯಾಂಡ್, ಜಲ್ಲಿಕಲ್ಲು, ಬಿಳಿಕಲ್ಲು ಸಾಗಾಣಿಕೆ ಎಗ್ಗಿಲ್ಲದೆ ಸಾಗುತ್ತಿದ್ದು, ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪರ್ಮಿಟ್ ಇಲ್ಲದೆ ಕೇರಳಕ್ಕೆ ಕಲ್ಲು ಸಾಗಾಣಿಕೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ ರೈತರು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ಅರ್ಥಿಕ ನಷ್ಟ ಉಂಟಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಹಲವು ರೈತರು ಅಕ್ರಮವಾಗಿ ಕಲ್ಲು ಸಾಗಾಣಿಕೆ ಮಾಡುತ್ತಿದ್ದ ಲಾರಿ ಹಾಗೂ ಟಿಪ್ಪರ್ಗಳನ್ನು ತಡೆದು ಕಿಡಿಕಾರಿದ್ದಾರೆ.
ಪ್ರತಿನಿತ್ಯ ನೂರಾರು ಲಾರಿಗಳಿಂದ ಕಲ್ಲು, ಎಂ ಸ್ಯಾಂಡ್ ಸಾಗಾಟ ಎಗ್ಗಿಲ್ಲದೇ ನಡೆಯುತ್ತಿದ್ದು, ಕರ್ನಾಟಕದ ಸಂಪತ್ತು ಅನ್ಯ ರಾಜ್ಯದ ಪಾಲಾಗುತ್ತಿರುವುದನ್ನು ತಡೆಯಲು ರೈತರು ಒತ್ತಾಯಿಸಿದ್ದಾರೆ. ಇದರಲ್ಲಿ ಪೊಲೀಸರು ಕೂಡ ಶಾಮೀಲಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…